ಎಂ ಲಕ್ಷ್ಮಣ್ 
ರಾಜ್ಯ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ 800 ರೂ.: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮಾರ್ಚ್ ಅಂತ್ಯದ ವೇಳೆಗೆ ತೆರೆಯಲಿರುವ 10 ಪಥದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಮೂಲಕ ತಮ್ಮ ವಾಹನಗಳನ್ನು ಓಡಿಸಲು ಯೋಜಿಸುವ ಪ್ರಯಾಣಿಕರು ಕೇವಲ 800 ರೂಪಾಯಿಗಳನ್ನು ಟೋಲ್‌ನಲ್ಲಿ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಮೈಸೂರು: ಮಾರ್ಚ್ ಅಂತ್ಯದ ವೇಳೆಗೆ ತೆರೆಯಲಿರುವ 10 ಪಥದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಮೂಲಕ ತಮ್ಮ ವಾಹನಗಳನ್ನು ಓಡಿಸಲು ಯೋಜಿಸುವ ಪ್ರಯಾಣಿಕರು ಕೇವಲ 800 ರೂಪಾಯಿಗಳನ್ನು ಟೋಲ್‌ನಲ್ಲಿ ಪಾವತಿಸಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವಕ್ತಾರ ಎಂ.ಲಕ್ಷ್ಮಣ್ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 118 ಕಿಮೀ ರಸ್ತೆಯಿಂದ ಮೈಸೂರು-ಬೆಂಗಳೂರು ನಡುವಿನ ಪ್ರಯಾಣದ ಅವಧಿ 90 ನಿಮಿಷಕ್ಕೆ ಕಡಿಮೆಯಾಗುತ್ತದೆ. ಎರಡು ಟೋಲ್ ಪ್ಲಾಜಾಗಳಾದ ಕೆ ಶೆಟ್ಟಿಹಳ್ಳಿ ಬಳಿಯ ಗಣಗೂರು ಮತ್ತು ಇನ್ನೊಂದು ಕುಂಬಳಗೋಡು ಬಳಿ ಎತ್ತರದ ಸ್ಟ್ರೆಚ್‌ಗಳಲ್ಲಿ ಸ್ಥಾಪಿಸಲಾಗಿದೆ. ಪ್ರತಿ ಕಿ.ಮೀ.ಗೆ ಸರಾಸರಿ 3 ರಿಂದ 4 ರೂ. ಆಗಿರುತ್ತದೆ. ಹೀಗಾಗಿ, ಪ್ರಯಾಣಿಕರು ಒಂದು ಮಾರ್ಗವಾಗಿ 380 ರಿಂದ 400 ರೂ. ವರೆಗೆ ಟೋಲ್ ಪಾವತಿಸಬೇಕಾಗುತ್ತದೆ. ಒಟ್ಟು 800 ರೂ. ಪಾವತಿಸಿ ಪ್ರಯಾಣಿಸಬೇಕಾಗುತ್ತದೆ ಎಂದರು.

ಯೋಜನಾ ವೆಚ್ಚವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಂಚಿಕೊಂಡಿರುವುದರಿಂದ, ಕಾಂಗ್ರೆಸ್ ನಾಯಕರ ಧೈರ್ಯವನ್ನು ಸದಾ ಪ್ರಶ್ನಿಸುವ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಧೈರ್ಯವನ್ನು ಪ್ರದರ್ಶಿಸಿ ಎಕ್ಸ್‌ಪ್ರೆಸ್‌ವೇಯನ್ನು ಟೋಲ್ ಮುಕ್ತಗೊಳಿಸಬೇಕು ಎಂದು ಅವರು ಹೇಳಿದರು.

2013ರ ಮೇನಲ್ಲಿ ಯುಪಿಎ-2 ಸರ್ಕಾರದಿಂದ ಎಕ್ಸ್‌ಪ್ರೆಸ್‌ವೇ ಮಂಜೂರಾಗಿದ್ದು, ಈ ಕೀರ್ತಿ ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಪಿಡಬ್ಲ್ಯುಡಿ ಸಚಿವ ಎಚ್‌ಸಿ ಮಹದೇವಪ್ಪ ಮತ್ತು ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಅವರಿಗೆ ಸಲ್ಲಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT