ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ರೈಲಿಗೆ ತಲೆಕೊಟ್ಟು ಆದಾಯ ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಆದಾಯ ತೆರಿಗೆ ಇಲಾಖೆಯ ಇನ್ಸ್ ಪೆಕ್ಟರ್ ಓರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಇನ್ಸ್ ಪೆಕ್ಟರ್ ಓರ್ವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ತೆರಿಗೆ ಇಲಾಖೆ ಇನ್ಸ್ ಪೆಕ್ಟರ್ ದೇವೇಂದ್ರ ದುಬೆ ಆತ್ಮಹತ್ಯೆ ಮಾಡಿಕೊಂಡವರು. ಕಳೆದ 10 ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉತ್ತರಪ್ರದೇಶ ಮೂಲದ ದೇವೆಂದ್ರ ದುಬೆ ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾವಿಗೂ ಮುನ್ನ ದೇವೇಂದ್ರ ದುಬೆ ಉತ್ತರಪ್ರದೇಶದಲ್ಲಿರುವ ತನ್ನ ತಂದೆ-ತಾಯಿ ಜೊತೆ ಫೋನ್ ನಲ್ಲಿ ಮಾತನಾಡಿದ್ದಾರೆ. ಪತ್ನಿ ಆರತಿ ಮಾಳವಿ ಅವರಿಗೆ ಕರೆ ಮಾಡಿ ಸಂಜೆ ಮನೆಗೆ ಬರುವುದಾಗಿಯೂ ಹೇಳಿದ್ದಾರೆ.

ಆದರೆ ಸಂಜೆಯಾದರೂ ಮನೆಗೆ ಬಂದಿಲ್ಲ, ಪತ್ನಿ ಮೊಬೈಲ್ ಗೆ ಇನ್ಶುರೆನ್ಸ್ ಪಾಲಿಸಿ ಹಾಗೂ ಡೆತ್ ನೋಟ್ ವಾಟ್ಸಪ್ ಮೂಲಕ ಸೆಂಡ್ ಮಾಡಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ ಎಂದು ವಾಟ್ಸಪ್ ಮಾಡಿ ಸಾವಿಗೆ ಶರಣಾಗಿದ್ದಾರೆ.

ಪತಿ ನಾಪತ್ತೆ ಬಗ್ಗೆ ಆರತಿ ಮಾಳವಿಯ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೇವೇಂದ್ರ ದುಬೆ ಅವರ ಮೃತದೇಹ ಶೇಷಾದ್ರಿಪುರಂ ಬಿಡಿಎ ಬಳಿಯ ರೈಲ್ವೆ ಹಳಿ ಮೇಲೆ ಪತ್ತೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT