ಸಿದ್ದರಾಮಯ್ಯ-ಡಿಕೆ ಶಿವಕುಮಾರ್ 
ರಾಜ್ಯ

ರಾಜ್ಯಪಾಲರ ಭಾಷಣದಲ್ಲಿ ಹೊಸದೇನೂ ಇಲ್ಲ; ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರತಿಪಕ್ಷ ಕಾಂಗ್ರೆಸ್

ಶುಕ್ರವಾರ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು:  ಶುಕ್ರವಾರ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಪ್ರಮುಖ ಸಮಸ್ಯೆಯಾಗಿರುವ ಭ್ರಷ್ಟಾಚಾರದ ವಿರುದ್ಧ ಹೋರಾಡಲು ಕ್ರಮಗಳನ್ನು ತೆಗೆದುಕೊಳ್ಳುವ ಬಗ್ಗೆ ರಾಜ್ಯಪಾಲರು ಮಾತನಾಡಿಲ್ಲ ಎಂದು ದೂರಿದರು.

ಭ್ರಷ್ಟಾಚಾರವು ರಾಜ್ಯಕ್ಕೆ ದೊಡ್ಡ ಅಪಾಯವಾಗಿದೆ. ಆದರೆ, ಅದನ್ನು ಕೊನೆಗೊಳಿಸಲು ಕೈಗೊಂಡ ಕ್ರಮಗಳ ಬಗ್ಗೆ ರಾಜ್ಯಪಾಲರ ಭಾಷಣದಲ್ಲಿ ಒಂದು ಪದವೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷದ ಪ್ರಜಾಧ್ವನಿ ಯಾತ್ರೆಯಲ್ಲಿ ನಿರತರಾಗಿದ್ದ ಕಾರಣ ಅವರು ಶುಕ್ರವಾರ ಅಧಿವೇಶನಕ್ಕೆ ಗೈರಾಗಿದ್ದರು.

ಭ್ರಷ್ಟಾಚಾರ, ನಿರುದ್ಯೋಗ, ಬೆಲೆ ಏರಿಕೆ, ಕೃಷಿ ಬಿಕ್ಕಟ್ಟು ಮತ್ತು ನೇಕಾರರು ಮತ್ತು ಸಣ್ಣ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳಂತಹ ಪ್ರಮುಖ ಸಮಸ್ಯೆಗಳಿಗೆ ರಾಜ್ಯ ಸರ್ಕಾರ ಮಹತ್ವ ನೀಡುತ್ತಿಲ್ಲ. ರಾಜ್ಯಪಾಲರ ಭಾಷಣದಲ್ಲಿ ಕಳೆದ ವರ್ಷದ ರಾಜ್ಯ ಸರ್ಕಾರದ ಸಾಧನೆಗಳ ಬಗ್ಗೆ ಹೇಳಲಾಗಿದೆ. ಆದರೆ, ಸರ್ಕಾರ ಯಾವುದೇ ಕೆಲಸ ಮಾಡಿಲ್ಲ. 82 ಪ್ಯಾರಾಗ್ರಾಫ್ ಭಾಷಣದಲ್ಲಿ, ರಾಜ್ಯಪಾಲರು ಸಮಸ್ಯೆಗಳ ಬಗ್ಗೆ ಒಂದು ಮಾತನ್ನೂ ಆಡಲಿಲ್ಲ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕದಲ್ಲಿ ಯಥೇಚ್ಛವಾಗಿ ನೀರು ಲಭ್ಯವಿದ್ದರೂ ಕೊಪ್ಪಳ, ಯಾದಗಿರಿ, ಬಳ್ಳಾರಿ ಸೇರಿದಂತೆ ಜಿಲ್ಲೆಗಳಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಉತ್ತರ ಕರ್ನಾಟಕ ಹಲವು ಅಂಶಗಳಲ್ಲಿ ಹಿಂದುಳಿದಿದೆ. ಆದರೆ, ರಾಜ್ಯಪಾಲರ ಭಾಷಣದಲ್ಲಿ ಈ ಭಾಗದ ಸಮಗ್ರ ಅಭಿವೃದ್ಧಿ ಯೋಜನೆಯ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಅವರು ಹೇಳಿದರು.

ರಾಜ್ಯದ ಆದಾಯಕ್ಕೆ ಬೆಂಗಳೂರು ಶೇ 70ರಷ್ಟು ಕೊಡುಗೆ ನೀಡುತ್ತಿದೆ. ಆದರೆ, ನಗರದ ಅಭಿವೃದ್ಧಿಗೆ ಸರ್ಕಾರದ ಯೋಜನೆಗಳ ಬಗ್ಗೆ ಸ್ಪಷ್ಟತೆ ಇಲ್ಲ. ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಲೇಔಟ್‌ಗಳನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ ಎಂದು ಮಾಜಿ ಸಿಎಂ ಹೇಳಿದರು. 

ರಾಜ್ಯಪಾಲರ ಭಾಷಣದಲ್ಲಿ ಉಲ್ಲೇಖಿಸಲಾದ ಹಲವು ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.

ಡಿಕೆ ಶಿವಕುಮಾರ್ ಮಾತನಾಡಿ, ರಾಜ್ಯಪಾಲರ ಭಾಷಣ ಸುಳ್ಳಿನ ಕಂತೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ಕಾರ್ಯಗಳಿಗೆ ಬಿಜೆಪಿ ಸರ್ಕಾರ ಮನ್ನಣೆ ನೀಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT