ಪರಶುರಾಮ್ - ಶಿವು - ಸಂದೇಶ್ 
ರಾಜ್ಯ

ಹಿಟ್ ಅಂಡ್ ರನ್ ಪ್ರಕರಣ: ದಾವಣಗೆರೆಯಲ್ಲಿ ಅಪಘಾತ, ಬೈಕ್‌ನಲ್ಲಿದ್ದ ಮೂವರು ಯುವಕರ ಸಾವು

ದಾವಣಗೆರೆ ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಶುಕ್ರವಾರ ತಡರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾವಣಗೆರೆ: ಜಿಲ್ಲೆಯಲ್ಲಿ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಮೂವರು ಯುವಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಶುಕ್ರವಾರ ತಡರಾತ್ರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು 24 ವರ್ಷದ ಪರಶುರಾಮ್, 23 ವರ್ಷದ ಸಂದೇಶ್ ಮತ್ತು 26 ವರ್ಷದ ಶಿವು ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಾವಣಗೆರೆ ಸಮೀಪದ ರಾಮನಗರ ನಿವಾಸಿಗಳು ಎನ್ನಲಾಗಿದೆ.

ಯುವಕರು ಕಾಟಿಹಳ್ಳಿ ಗ್ರಾಮಕ್ಕೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಈ ಮೂವರು ಯುವಕರು ದಾವಣಗೆರೆ ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ ಸಂಬಂಧಿಕರ ಮನೆಯಲ್ಲಿನ ಕಾರ್ಯಕ್ರಮವೊಂದರಲ್ಲಿ ಊಟ ಮಾಡಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿ ಹಾಗೂ ಸ್ಥಳೀಯರ ಹೇಳಿಕೆಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ.

ಅಪಘಾತ ಮಾಡಿದ ವಾಹನದ ಬಗ್ಗೆ ಇದುವರೆಗೆ ಪೊಲೀಸರಿಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT