ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸಾಂದರ್ಭಿಕ ಚಿತ್ರ 
ರಾಜ್ಯ

ಜೈನ್ ವಿವಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಸ್ಕಿಟ್ ನಲ್ಲಿ ಅವಮಾನ; ವರದಿ ನೀಡಲು ಉನ್ನತ ಶಿಕ್ಷಣ ಸಚಿವರ ಸೂಚನೆ

ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ತನಿಖೆ ನಡೆಸಿ  ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದಾಸ್ಪದವಾಗಿರುವ ಹಿನ್ನೆಲೆಯಲ್ಲಿ, ಸೂಕ್ತ ತನಿಖೆ ನಡೆಸಿ  ವರದಿ ಸಲ್ಲಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, "ಜೈನ್ ಕಾಲೇಜಿನಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆ ದುರದೃಷ್ಟಕರ. ಬಾಬಾಸಾಹೇಬ್ ಅಂಬೇಡ್ಕರ್ ಅವರು ದೇಶದ ಸಂವಿಧಾನ ಶಿಲ್ಪಿಗಳಾಗಿದ್ದಾರೆ. ಅವರನ್ನು ಇಡೀ ಜಗತ್ತೇ ಗೌರವಿಸುತ್ತಿದೆ. ಅಂಥವರನ್ನು ಅಪಮಾನಿಸಿದ್ದರೆ ಅದನ್ನು ಒಪ್ಪುವುದು ಸಾಧ್ಯವಿಲ್ಲ ಎಂದಿದ್ದಾರೆ.

ಘಟನೆಯ ಬಗ್ಗೆ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ಗಮನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶನಿವಾರವೇ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ಕೊಡಲಾಗಿದೆ. ಅವರು ಸದ್ಯದಲ್ಲೇ ವರದಿ ಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಏನಿದು ವಿವಾದ: ವಿವಾದಾತ್ಮಕ ವಿಡಿಯೋದಲ್ಲಿ ತಳ ಸಮುದಾಯದ ವ್ಯಕ್ತಿಯೊಬ್ಬ ಮೇಲ್ವರ್ಗದ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಕಿರು ನಾಟಕದಲ್ಲಿ ಪ್ರದರ್ಶಿಸಲಾಗಿದೆ. ಇದೇ ವೇಳೆ ಆತ ತಾನು ದಲಿತ ಎಂದು ಹೇಳಿಕೊಳ್ಳುವ ಸನ್ನಿವೇಶ ಬರುತ್ತದೆ. ಆಗ ಡೋಂಟ್ ಟಚ್ ಮಿ, ಟಚ್ ಮಿ ಎಂಬ ಹಾಡನ್ನು ಹಾಕಿರುವುದು ಕಂಡುಬಂದಿದೆ. ಹಾಗೆಯೇ ಈ ನಾಟಕದಲ್ಲಿ ಬಿ.ಆರ್. ಅಂಬೇಡ್ಕರ್ ಅವರನ್ನು ಬಿಯರ್ ಅಂಬೇಡ್ಕರ್ ಎಂದು ಅವಹೇಳನ ಮಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಸ್ಕಿಟ್ ನಲ್ಲಿ ಭಾಗಿಯಾಗಿರುವವರು, ಸ್ಕಿಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದಾರೆ.  ಈ  ರೀತಿಯ ಘಟನೆ ಅತ್ಯಂತ ಖಂಡನೀಯ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT