ಪ್ರಾತಿನಿಧಿಕ ಚಿತ್ರ 
ರಾಜ್ಯ

ಇಬ್ಬರು ಕಾರ್ಯಕರ್ತರ ವಿರುದ್ಧ ರೌಡಿಶೀಟರ್ ಪ್ರಕರಣ ದಾಖಲು: ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳು

ವಿಧಾನಸಭಾ ಚುನಾವಣೆಗೂ ಮುನ್ನ ಕನ್ನಡ ಕಾರ್ಯಕರ್ತರ ಮೇಲೆ ರೌಡಿಶೀಟರ್ ಪ್ರಕರಣ ದಾಖಲಿಸಿರುವ ಪೊಲೀಸ್ ಇಲಾಖೆ ವಿರುದ್ಧ ಕನ್ನಡ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಳಗಾವಿ: ವಿಧಾನಸಭಾ ಚುನಾವಣೆಗೂ ಮುನ್ನ ಕನ್ನಡ ಕಾರ್ಯಕರ್ತರ ಮೇಲೆ ರೌಡಿಶೀಟರ್ ಪ್ರಕರಣ ದಾಖಲಿಸಿರುವ ಪೊಲೀಸ್ ಇಲಾಖೆ ವಿರುದ್ಧ ಕನ್ನಡ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಇತ್ತೀಚೆಗೆ ಬೆಳಗಾವಿ ಮಹಾನಗರ ಪಾಲಿಕೆಗೆ (ಬಿಸಿಸಿ) ಮರಾಠಿ ಭಾಷಿಕ ಮೇಯರ್ ಮತ್ತು ಉಪಮೇಯರ್ ಆಯ್ಕೆ ನಡೆದಿರುವುದು ಕನ್ನಡ ಸಂಘಟನೆಗಳನ್ನು ಮತ್ತಷ್ಟು ಕೆರಳಿಸಿದೆ.

ಇದೀಗ ಕನ್ನಡಪರ ಹೋರಾಟಗಾರರನ್ನು ರೌಡಿ ಶೀಟರ್ ಎಂದು ಕರೆದು ನೋಟೀಸ್ ಜಾರಿ ಮಾಡಿದ್ದು, ಚುನಾವಣೆ ವೇಳೆ ಉತ್ತಮವಾಗಿ ನಡೆದುಕೊಳ್ಳುವುದಾಗಿ ಅಫಿಡವಿಟ್ ಸಲ್ಲಿಸುವಂತೆ ಹೇಳಿರುವುದು ಕನ್ನಡಪರ ಸಂಘಟನೆಗಳನ್ನು ಮತ್ತಷ್ಟು ಕೆರಳಿಸಿದೆ.

ರಾಜ್ಯ ವಿಧಾನಸಭೆ ಅಧಿವೇಶನಕ್ಕೆ ಸಮಾನಾಂತರವಾಗಿ 2019 ರಲ್ಲಿ ನಡೆದ ಮಹಾ ಮೇಳಾವ್‌ನಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮುಖಂಡ ದೀಪಕ್ ದಳವಿ ಅವರ ಮುಖಕ್ಕೆ ಮಸಿ ಬಳಿದ ಕನ್ನಡಪರ ಹೋರಾಟಗಾರರಾದ ಸಂಪತ್‌ಕುಮಾರ್ ದೇಸಾಯಿ ಮತ್ತು ಅನಿಲ್ ದಡ್ಡಿಮನಿ ವಿರುದ್ಧ ನಗರ ಪೊಲೀಸರು ರೌಡಿಶೀಟರ್ ಪ್ರಕರಣ ದಾಖಲಿಸಿದ್ದಾರೆ.

ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ತುರ್ತು ಸಭೆಯಲ್ಲಿ ಇಬ್ಬರ ಮೇಲಿನ ರೌಡಿ ಶೀಟರ್ ಪ್ರಕರಣ ಕೈಬಿಡುವಂತೆ ಕನ್ನಡಪರ ಸಂಘಟನೆಗಳು ಪೊಲೀಸರಿಗೆ ಒತ್ತಾಯಿಸಿದವು. ಈ ನಿಟ್ಟಿನಲ್ಲಿ ಫೇಸ್ ಬುಕ್, ವಾಟ್ಸಾಪ್, ಟ್ವಿಟರ್‌ನಲ್ಲಿ ಆನ್‌ಲೈನ್ ಅಭಿಯಾನ ಆರಂಭವಾಗಿದೆ. ಸರ್ಕಾರ ‘ಕನ್ನಡಿಗ ವಿರೋಧಿ’ ಎಂದು ಪ್ರಚಾರಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT