ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ರಾಜನಾಥ್ ಸಿಂಗ್ 
ರಾಜ್ಯ

ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023: ಬೆಂಗಳೂರಿಗೆ ಬಂದಿಳಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023  ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಾಳೆಯಿಂದ ಐದು ದಿನಗಳ ಕಾಲ ನಡೆಯಲಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023  ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿಗೆ ಆಗಮಿಸಿದರು.

ಹೆಚ್ಎಎಲ್‌ ವಿಮಾನ ನಿಲ್ದಾಣದಲ್ಲಿ ಅವರಿಗೆ ಆತ್ಮೀಯವಾಗಿ ಸ್ವಾಗತಿಸಲಾಯಿತು. ಬಿಜೆಪಿ ಹಿರಿಯ ಮುಖಂಡ ಅರವಿಂದ ಲಿಂಬಾವಳಿ ಮತ್ತಿತರರು ರಾಜನಾಥ್ ಸಿಂಗ್ ಅವರನ್ನು  ಬರಮಾಡಿಕೊಂಡರು.

ಇದಕ್ಕೂ ಮುನ್ನಾ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ತೆರಳುತ್ತಿರುವುದಾಗಿ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದರು. 

ಏಷ್ಯಾದ ಅತಿದೊಡ್ಡ ಏರ್ ಶೋಗೆ ಪ್ರಧಾನಿ ನರೇಂದ್ರ ಮೋದಿ ನಾಳೆ ಚಾಲನೆ ನೀಡಲಿದ್ದಾರೆ.  ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ, ರಾಜಭವನದಲ್ಲಿ ತಂಗಲಿದ್ದಾರೆ. ಸೋಮವಾರ ರಾಜಭವನದಿಂದ ಹೆಲಿಕಾಪ್ಟರ್ ಮೂಲಕ ಯಲಹಂಕ ವಾಯುನೆಲೆಗೆ ತೆರಳುವರು. 

ಬೆಳಗ್ಗೆ 9-30 ರಿಂದ 11-30ರವರೆಗೆ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ವೈಮಾನಿಕ ಪ್ರದರ್ಶನ ವೀಕ್ಷಿಸುವರು, ನಂತರ 11-45ಕ್ಕೆ ಅಲ್ಲಿಂದಲೇ ವಾಯುಪಡೆ ವಿಮಾನದಲ್ಲಿ ತ್ರಿಪುರಾಕ್ಕೆ ತೆರಳುವರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT