ಅರಮನೆ ಮೈದಾನದಲ್ಲಿ ಬೆಂಕಿ 
ರಾಜ್ಯ

ಬೆಂಗಳೂರು: ಅರಮನೆ ಮೈದಾನದಲ್ಲಿ ಅಗ್ನಿ ಅವಘಡ; 3 ಕಾರು ಬೆಂಕಿಗಾಹುತಿ

ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ಭಾನುವಾರ ನಡೆದಿದೆ.

ಭಾನುವಾರ ಮಧ್ಯಾಹ್ನ ಅರಮನೆ ಮೈದಾನದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಕಾರುಗಳು ಸುಟ್ಟು ಭಸ್ಮವಾಗಿದ್ದು ಇನ್ನೊಂದು ಕಾರು ಭಾಗಶಃ ಹಾನಿಯಾಗಿದೆ.

ಅರಮನೆ ಮೈದಾನದಲ್ಲಿರುವ ಕಿಂಗ್ಸ್ ಕೋರ್ಟ್‌ಗೆ ಹೊಂದಿಕೊಂಡಿರುವ ಪಾರ್ಕಿಂಗ್ ಸ್ಥಳದಲ್ಲಿ ಮಧ್ಯಾಹ್ನ 2.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 

"ಪಾರ್ಕಿಂಗ್ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳು ಮತ್ತು ಒಣ ಎಲೆಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿದ್ದು, ಬಳಿಕ ಬೆಂಕಿ ಮೂರು ಕಾರುಗಳಿಗೆ ವ್ಯಾಪಿಸಿದೆ. ಮಹೀಂದ್ರಾ ಎಕ್ಸ್‌ಯುವಿ ಮತ್ತು ಮಾರುತಿ ಎರ್ಟಿಗಾ ಕಾರುಗಳು ಸಂಪೂರ್ಣವಾಗಿ ಸುಟ್ಟುಹೋಗಿದೆ ಮತ್ತು ಹ್ಯುಂಡೈ ಕ್ರೆಟಾ ಸುಮಾರು 25% ನಷ್ಟು ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಿಗರೇಟ್ ತುಂಡಿನಿಂದ ಬೆಂಕಿ
ಇನ್ನು ಇಲ್ಲಿ ಯಾರೋ ಸೇದಿ ಬಿಸಾಡಿ ಹೋದ ಸಿಗರೇಟ್ ತುಂಡಿನಿಂದ ಒಣ ತ್ಯಾಜ್ಯಕ್ಕೆ ಬೆಂಕಿ ಹೊತ್ತಿದ್ದು, ಅದು ಕಾರುಗಳಿಗೆ ವ್ಯಾಪಿಸಿರಬಹುದು ಎಂದು ಶಂಕಿಸಲಾಗಿದೆ. ಆದರೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT