ಸಾಂದರ್ಭಿಕ ಚಿತ್ರ 
ರಾಜ್ಯ

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವು

ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. 

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಭಾನುವಾರ ವರದಿಯಾಗಿದೆ. ಮೃತರನ್ನು ಕೂಡ್ಲೂರಿನ ಬಾಲಕರಾದ ಪೃಥ್ವಿ (9) ಮತ್ತು ಪ್ರಜ್ವಲ್ ಎಂದು ಗುರುತಿಸಲಾಗಿದೆ. 

ನಾಗರಾಜ್ ಹಾಗೂ ಸತೀಶ್ ಎಂಬವರ ಪುತ್ರರಾದ ಇವರು ಮನೆಯ ಹಿಂಭಾಗದಲ್ಲಿರುವ ಕಾವೇರಿ ನದಿ ದಂಡೆ ಮೇಲೆ ಮೀನು ಹಿಡಿಯಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಬಾಲಕರು ಅಣ್ಣ, ತಮ್ಮನ ಮಕ್ಕಳಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ, ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ನಂತರ ಕುಶಾಲ ನಗರ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT