ಇ-ಬಸ್ 
ರಾಜ್ಯ

ಐದು ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಇ-ಬಸ್‌; ಪ್ರಯಾಣಿಕರ ಸಂಚಾರಕ್ಕೆ ಎಲೆಕ್ಟ್ರಿಕ್ ಬಸ್‌ ಸಿಗುವುದು ತಡವಾಗಬಹುದು!

ರಾಜ್ಯದಲ್ಲಿ ಐದು ಮಾರ್ಗಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಓಡಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಯೋಜನೆ ಫೆಬ್ರುವರಿಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿಲ್ಲ. ಏಕೆಂದರೆ, ಖಾಸಗಿ ನಿರ್ವಾಹಕರು ಇನ್ನೂ 49 ಬಸ್‌ಗಳನ್ನು ತಲುಪಿಸಬೇಕಿದೆ ಎಂದು ಸಾರಿಗೆ ಸಂಸ್ಥೆಯ ಮೂಲಗಳು ತಿಳಿಸಿವೆ. 

ಬೆಂಗಳೂರು: ರಾಜ್ಯದಲ್ಲಿ ಐದು ಮಾರ್ಗಗಳಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಓಡಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್‌ಟಿಸಿ) ಯೋಜನೆ ಫೆಬ್ರುವರಿಯಲ್ಲಿ ಪ್ರಾರಂಭವಾಗುವ ಸಾಧ್ಯತೆಯಿಲ್ಲ. ಏಕೆಂದರೆ, ಖಾಸಗಿ ನಿರ್ವಾಹಕರು ಇನ್ನೂ 49 ಬಸ್‌ಗಳನ್ನು ತಲುಪಿಸಬೇಕಿದ್ದು, ಪ್ರಯಾಣಿಕರ ಸೇವೆಗೆ ಬಿಡುವುದು ತಡವಾಗಬಹುದು ಎಂದು ಸಾರಿಗೆ ಸಂಸ್ಥೆಯ ಮೂಲಗಳು ತಿಳಿಸಿವೆ. 

ಬೆಂಗಳೂರು-ಮೈಸೂರು ನಡುವೆ ಮೊದಲ ಎಲೆಕ್ಟ್ರಿಕ್ ಬಸ್ ಯಶಸ್ವಿಯಾಗಿ ಓಡುತ್ತಿದ್ದು, ಪ್ರಯಾಣಿಕರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಇತರ ಮಾರ್ಗಗಳಿಂದಲೂ ಇದೇ ಬೇಡಿಕೆಯಿದ್ದರೂ, ಪ್ರಯಾಣಿಕರು ಈ ಸೌಲಭ್ಯವನ್ನು ಪಡೆಯಲು ಮಾರ್ಚ್‌ವರೆಗೆ ಕಾಯಬೇಕಾಗಬಹುದು.

ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಕೆಲಸ ಮಾಡುತ್ತಿರುವ ಪ್ರಶಾಂತ್ ಎಂ ಮೈಸೂರಿನಿಂದ ಬೆಂಗಳೂರಿಗೆ ಇ-ಬಸ್‌ನಲ್ಲಿ ಪ್ರಯಾಣಿಸಿ ಪ್ರಭಾವಿತರಾದರು. 'ಸಂಪೂರ್ಣವಾಗಿ ಯಾವುದೇ ಶಬ್ದವಿಲ್ಲ ಮತ್ತು ಸವಾರಿ ಸಂಪೂರ್ಣವಾಗಿ ಸುಗಮವಾಗಿದೆ ಮತ್ತು ದಣಿವಾಗುವುದಿಲ್ಲ. ಪರಿಸರ ಸ್ನೇಹಿಯಾಗಿರುವುದರಿಂದ ಮೈಸೂರಿಗೆ ಮತ್ತು ಕರ್ನಾಟಕದ ವಿವಿಧ ಭಾಗಗಳಿಗೆ ಇ-ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಿದರೆ ಒಳ್ಳೆಯದು' ಎಂದು ಅವರು ಹೇಳುತ್ತಾರೆ.

ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವುದು ಸೇರಿದಂತೆ ಇ-ಬಸ್‌ಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ಕಾರ್ಯಗಳು ನಡೆಯುತ್ತಿವೆ ಮತ್ತು ಖಾಸಗಿ ನಿರ್ವಾಹಕರಿಂದ ಬಸ್‌ಗಳ ವಿತರಣೆಗಾಗಿ ಅವರು ಕಾಯುತ್ತಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಮೂಲಗಳು ತಿಳಿಸಿವೆ. 

ಇ-ಬಸ್‌ಗಳಿಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಯಾಣವು ಸದ್ದುಗದ್ದಲವಿಲ್ಲದೆ ಮತ್ತು ಸುಗಮವಾಗಿರುವುದರಿಂದ ಅವರು ಈ ಅನುಭವವನ್ನು ಪ್ರೀತಿಸುತ್ತಾರೆ. ಈ ತಿಂಗಳ ಅಂತ್ಯ ಅಥವಾ ಮಾರ್ಚ್‌ನಲ್ಲಿ ಕನಿಷ್ಠ 25 ಬಸ್‌ಗಳ ವಿತರಣೆಯನ್ನು ನಾವು ನಿರೀಕ್ಷಿಸುತ್ತಿದ್ದೇವೆ ಎನ್ನುತ್ತಾರೆ ಅಧಿಕಾರಿಗಳು.

ಬಸ್‌ಗಳು ನಮಗೆ ಸಿಕ್ಕ ನಂತರ, ಅವುಗಳನ್ನು ನೋಂದಾಯಿಸಬೇಕು, ಪರೀಕ್ಷಿಸಬೇಕು ಮತ್ತು ಪ್ರಯೋಗಗಳಿಗೆ ಒಳಪಡಿಸಬೇಕು. ಹೀಗಾಗಿ, ಇದು ಬಸ್‌ಗಳನ್ನು ಸೇವೆಗೆ ಬಿಡುವುದು ತಡವಾಗುವ ಸಾಧ್ಯತೆ ಇದೆ ಎಂದು ಮೂಲವೊಂದು ತಿಳಿಸಿದೆ. 

ನಾವು ಬೆಂಗಳೂರಿನಿಂದ ಇ-ಬಸ್‌ಗಳಿಗಾಗಿ ಐದು ಮಾರ್ಗಗಳನ್ನು ಅಂತಿಮಗೊಳಿಸಿದ್ದೇವೆ. ಬಸ್‌ಗಳು ಬಂದ ನಂತರ ಬೆಂಗಳೂರಿನಿಂದ ಮಡಿಕೇರಿ, ವಿರಾಜಪೇಟೆ, ಚಿಕ್ಕಮಗಳೂರು, ದಾವಣಗೆರೆ ಮತ್ತು ಶಿವಮೊಗ್ಗಕ್ಕೆ ಕಾರ್ಯನಿರ್ವಹಿಸಲಿವೆ. 

ಈಗಾಗಲೇ ಬೆಂಗಳೂರು ಮತ್ತು ಮೈಸೂರಿನಲ್ಲಿ ಚಾರ್ಜಿಂಗ್ ಸ್ಟೇಷನ್‌ಗಳು ಜಾರಿಯಲ್ಲಿದ್ದರೆ, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್ ನಿಲ್ದಾಣಗಳಲ್ಲಿ ಅವುಗಳನ್ನು ಸ್ಥಾಪಿಸುವ ಕೆಲಸಗಳು ನಡೆಯುತ್ತಿವೆ. ಇ-ಬಸ್ ಒಂದೇ ಚಾರ್ಜ್‌ನಲ್ಲಿ 300 ಕಿಮೀ ಓಡುವ ಸಾಮರ್ಥ್ಯ ಹೊಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ಸಿಎಂ ಆಪ್ತ ಗುಂಪಿನಿಂದ ಸ್ಪೋಟಕ ಸಂದೇಶ, ಡಾ. ಜಿ. ಪರಮೇಶ್ವರ್ ಹೇಳಿದ್ದೇನು?

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

SCROLL FOR NEXT