ಸಂಗ್ರಹ ಚಿತ್ರ 
ರಾಜ್ಯ

ಜೈನ್ ವಿವಿಯಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಕುರಿತ ಸ್ಕಿಟ್ ನಲ್ಲಿ ಅವಮಾನ; 7 ವಿದ್ಯಾರ್ಥಿಗಳ ಬಂಧನ

ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ಸಿದ್ದಾಪುರ ಪೊಲೀಸರು ಜೈನ್‌ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ನಗರದ ಜೈನ್ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಕುರಿತು ಪ್ರದರ್ಶಿಸಿದ ಕಿರುನಾಟಕ ವಿವಾದ ಸ್ವರೂಪ ಪಡೆದುಕೊಂಡಿದ್ದು, ಈ ಸಂಬಂಧ ಸಿದ್ದಾಪುರ ಪೊಲೀಸರು ಜೈನ್‌ ಕಾಲೇಜಿನ 7 ಮಂದಿ ವಿದ್ಯಾರ್ಥಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬಂಧಿತ ವಿದ್ಯಾರ್ಥಿಗಳು ಕಾಲೇಜಿನಲ್ಲಿ 5ನೇ ಸೆಮಿಸ್ಟರ್‌ನ ಬೇರೆ ಬೇರೆ ಕೋರ್ಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರೆಂದು ವರದಿಗಳು ತಿಳಿಸಿವೆ.

ದಕ್ಷಿಣ ವಿಭಾಗದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯಿಂದ ತಪ್ಪಿತಸ್ಥರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಕಾಲೇಜಿನ ಪ್ರಾಂಶುಪಾಲರು, ಡೀನ್, ಕಾರ್ಯಕ್ರಮ ಆಯೋಜಕರು, ವಿದ್ಯಾರ್ಥಿಗಳು ಹಾಗೂ ಸ್ಕಿಟ್ ಬರಹಗಾರರ ಮೇಲೆ ಕೇಸ್ ದಾಖಲಾಗಿತ್ತು.

ಜಯನಗರ ಎಸಿಪಿ ಶ್ರೀನಿವಾಸ್ ನೇತೃತ್ವದಲ್ಲಿ ತನಿಖೆ ಆರಂಭವಾಗಿದ್ದು, ಎಸ್‌ಸಿ, ಎಸ್‌ಟಿ ಆ್ಯಕ್ಟ್ ಹಾಗೂ ಐಪಿಸಿ 153a, 295a, 149 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿಗಳ ಸ್ಕಿಟ್ ಪ್ರದರ್ಶನದಿಂದಾಗಿ ಕಾಲೇಜಿಗೆ ಮುಜುಗರ ಎದುರಾಗಿರುವ ಹಿನ್ನೆಲೆಯಲ್ಲಿ ಜೈನ್‌ ಕಾಲೇಜು ಆಡಳಿತ ಮಂಡಳಿ ಅಸಮಾಧಾನಗೊಂಡಿದ್ದು, ಈಗಾಗಲೇ ಬೇಷರತ್ ಕ್ಷಮೆಯಾಚಿಸಿದೆ. ಅಲ್ಲದೆ. ವಿದ್ಯಾರ್ಥಿಗಳನ್ನು ಅಮಾನತು ಮಾಡಿದೆ ಎಂದು ತಿಳಿದುಬಂದಿದೆ. ಇದೀಗ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT