ಟ್ರಾಫಿಕ್ ದಂಡ 
ರಾಜ್ಯ

ಸಂಚಾರ ಉಲ್ಲಂಘನೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ, ನಾಳೆ ಅಧಿಕೃತ ಘೋಷಣೆ

ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಕುರಿತು ನಾಳೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟ್ರಾಫಿಕ್ ದಂಡ ಶೇ.50 ರಿಯಾಯಿತಿ ವಿಸ್ತರಿಸಲು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಬಗ್ಗೆ ಪತ್ರ ಬಂದಿದೆ. ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಕೂಡಾ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು. 

ಇನ್ನು ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ ಘೋಷಣೆ ಮಾಡಿದ್ದೇ ತಡ ವಾಹನ ಸವಾರರು ದಂಡ ಪಾವತಿಸುವುದಕ್ಕೆ ಸವಾರರು ಮುಗಿಬಿದ್ದಿದ್ದರು. ವಾಹನ ಸವಾರರು ಸರದಿ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದಾರೆ. ಬಹಳ ದಿನಗಳಿಂದ ಹಲವು ಕೇಸ್​ನೊಂದಿಗೆ ಸಾವಿರಾರು ರೂಪಾಯಿ ಬಾಕಿ ಉಳಿಸಿಕೊಂಡಿದ್ದವರು ಶೇ.50 ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. 

ಪೊಲೀಸ್ ಇಲಾಖೆ ಸಹ ರಿಯಾಯಿತಿ ನೀಡಿ ಸರ್ಕಾರದ ಬೊಕ್ಕಸ ತುಂಬಿಸಿದೆ. ಈ ಆಫರ್​ನಿಂದ 10 ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 122 ಕೋಟಿ ರೂ ಹರಿದು ಬಂದಿದ್ದು, ಸುಮಾರು 42 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಹೇಳಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT