ಟ್ರಾಫಿಕ್ ದಂಡ 
ರಾಜ್ಯ

ಸಂಚಾರ ಉಲ್ಲಂಘನೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ, ನಾಳೆ ಅಧಿಕೃತ ಘೋಷಣೆ

ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಕುರಿತು ನಾಳೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಟ್ರಾಫಿಕ್ ದಂಡ ಶೇ.50 ರಿಯಾಯಿತಿ ವಿಸ್ತರಿಸಲು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಬಗ್ಗೆ ಪತ್ರ ಬಂದಿದೆ. ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಕೂಡಾ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು. 

ಇನ್ನು ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ ಘೋಷಣೆ ಮಾಡಿದ್ದೇ ತಡ ವಾಹನ ಸವಾರರು ದಂಡ ಪಾವತಿಸುವುದಕ್ಕೆ ಸವಾರರು ಮುಗಿಬಿದ್ದಿದ್ದರು. ವಾಹನ ಸವಾರರು ಸರದಿ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದಾರೆ. ಬಹಳ ದಿನಗಳಿಂದ ಹಲವು ಕೇಸ್​ನೊಂದಿಗೆ ಸಾವಿರಾರು ರೂಪಾಯಿ ಬಾಕಿ ಉಳಿಸಿಕೊಂಡಿದ್ದವರು ಶೇ.50 ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. 

ಪೊಲೀಸ್ ಇಲಾಖೆ ಸಹ ರಿಯಾಯಿತಿ ನೀಡಿ ಸರ್ಕಾರದ ಬೊಕ್ಕಸ ತುಂಬಿಸಿದೆ. ಈ ಆಫರ್​ನಿಂದ 10 ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 122 ಕೋಟಿ ರೂ ಹರಿದು ಬಂದಿದ್ದು, ಸುಮಾರು 42 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಹೇಳಲಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ನಿಂದ 550ಕ್ಕೂ ಹೆಚ್ಚು ಭಾರತೀಯರ ಸ್ಥಳಾಂತರ; ಗಲ್ಫ್‌ನಿಂದ 20,000 ಜನ ಭಾರತಕ್ಕೆ ವಾಪಸ್

ವಿಧಾನಸಭೆ ಕಲಾಪ: ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಗಳ ತಲೆದಂಡ!

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ, 'Hormuz' ರಕ್ಷಣೆಗೆ NATO ನೆರವು ಕೋರಿದ ಟ್ರಂಪ್

ಆಪರೇಷನ್ ಸಿಂಧೂರ್ ಬಗ್ಗೆ ಪೋಸ್ಟ್‌: ಪ್ರೊ ಅಲಿ ಖಾನ್ ವಿರುದ್ಧದ ಕೇಸ್ ಕೈಬಿಟ್ಟ ಹರಿಯಾಣ ಸರ್ಕಾರ

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ!

SCROLL FOR NEXT