ಡಾ.ನಾರಾಯಣಗೌಡ ಮತ್ತಿತರರು 
ರಾಜ್ಯ

ಕಂಠೀರವ ಕ್ರೀಡಾಂಗಣಕ್ಕೆ ಹೊಸ ರೂಪ, ಸೌರ ಫಲಕ ಅಳವಡಿಕೆಯಿಂದ ವಿದ್ಯುತ್ ಉಳಿತಾಯ- ಡಾ. ನಾರಾಯಣಗೌಡ

ಐದೂವರೆ ಕೋಟಿ ವೆಚ್ಚದಲ್ಲಿ  ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಬೆಂಗಳೂರು: ಐದೂವರೆ ಕೋಟಿ ವೆಚ್ಚದಲ್ಲಿ  ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಗೆ ವಾಟರ್ ಪ್ರೂಫಿಂಗ್ ಅಳವಡಿಸಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.

ಕ್ರೀಡಾಂಗಣದ ಮೇಲ್ಛಾವಣಿಯ ಭಾಗದಲ್ಲಿ ನೀರು ಸೋರಿಕೆಯಾಗುತ್ತಿದ್ದರಿಂದ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಅವರಿಂದ ತಾಂತ್ರಿಕ ಸಲಹೆ ಪಡೆದು 5.64 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇದರ ಜೊತೆಗೆ ಕಂಠೀರವ ಹೊರಾಂಗಣ ಕ್ರೀಡಾಂಗಣದ ಮೇಲ್ಛಾವಣಿಯ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದೆ. ಟಾಟಾ ಸೋಲಾರ್ ಬಿ.ಪಿ ಕಂಪನಿಯ 48.60 ಕೀಲೋ ವ್ಯಾಟ್ ಸಾಮರ್ಥ್ಯದ 90 ಸೋಲಾರ್ ಪ್ಯಾನಲ್‌ಗಳನ್ನು ಜೋಡಿಸಲಾಗಿದ್ದು, ಪ್ರತಿದಿನ 192 ಯೂನಿಟ್ ವಿದ್ಯುತ್ ಉತ್ಪಾದನೆಯಾಗುವ ನಿರೀಕ್ಷೆ ಇದೆ ಎಂದು ಅವರು ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.

ಕಂಠೀರವ ಹೊರಾಂಗಣ ಕ್ರೀಡಾಂಗಣಕ್ಕಾಗಿ ಸುಮಾರು 70 ಕಿಲೋ ವ್ಯಾಟ್ ವಿದ್ಯುತ್ ಅವಶ್ಯಕತೆ ಇದೆ. ಸೋಲರ್‌ನಿಂದ ಉತ್ಪಾದನೆಯಾಗುವ ವಿದ್ಯುತ್ ಬಳಸಿಕೊಂಡು ಹೆಚ್ಚುವರಿ ವಿದ್ಯುತ್‌ನ್ನು 1 ಯೂನಿಟ್‌ಗೆ 3.19 ಪೈಸೆಯಂತೆ ಬೆಸ್ಕಾಂ ಕಂಪನಿ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗುತ್ತಿದೆ. ಸೋಲಾರ್ ಪ್ಯಾನಲ್ ಅಳವಡಿಸಿರುವುದರಿಂದ ವಿದ್ಯುತ್ ಬಿಲ್‌ನಲ್ಲಿ ಕ್ರೀಡಾ ಇಲಾಖೆಗೆ ಐದಾರು ಲಕ್ಷ ರೂಪಾಯಿಯಷ್ಟು ಉಳಿಕೆ ಆಗಲಿದೆ ಎಂದಿದ್ದಾರೆ. 

ಕಂಠೀರವ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿಯ ಸಮರ್ಪಕ ನಿರ್ವಹಣೆ ಇಲ್ಲದ ಕಾರಣ ಕೆಲವು ಭಾಗಗಳಲ್ಲಿ  ಅರಳಿ ಗಿಡಗಳು ಹುಟ್ಟಿಕೊಂಡು ಕಟ್ಟಡಕ್ಕೆ ಧಕ್ಕೆಯಾಗುವ ಸಾಧ್ಯತೆ ಇತ್ತು. ಅಲ್ಲದೇ ಮಳೆ ಬಂದ ಸಂದರ್ಭದಲ್ಲಿ ನೀರು ಸೋರಿ ಅಸ್ತವ್ಯಸ್ತವಾಗುತ್ತಿತ್ತು. ಇದನ್ನು ಮನಗಂಡು ಕೂಡಲೇ ದುರಸ್ತಿಗೊಳಿಸುವಂತೆ ಸೂಚಿಸಲಾಗಿತ್ತು. ಬಿಎಂಎಸ್ ಎಂಜಿನಿಯರಿಂಗ್ ಕಾಲೇಜುರವರಿಂದ ತಾಂತ್ರಿಕ ಸಲಹೆ ಪಡೆದು ಸುಮಾರು ನೀರು ಸೋರದಂತೆ ದುರಸ್ತಿಗೊಳಿಸಲಾಗಿದೆ.  ಗಿಡಗಂಟಿಗಳನ್ನು ತೆರವುಗೊಳಿಸಲಾಗಿದೆ‌ ಎಂದು ಅವರು ಮಾಹಿತಿ ನೀಡಿದ್ದಾರೆ.

 ಮುಂದಿನ ದಿನಗಳಲ್ಲಿ ಈ ರೀತಿ ಆಗದಂತೆ ಎಚ್ಚರಿಕೆವಹಿಸಿ, ಸೂಕ್ತ ನಿರ್ವಹಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರ ಜೊತೆಗೆ ಕಂಠೀರವ ಕ್ರೀಡಾಂಗಣ ಗ್ಯಾಲರಿ ಮೇಲೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದೆ‌‌. ಇದರಿಂದ ವಿದ್ಯುತ್ ಬಳಕೆ ಕಡಿಮೆಯಾಗಲಿದ್ದು, ಇಲಾಖೆಗೆ ಉಳಿತಾಯವಾಗಲಿದೆ ಎಂದು ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT