ಸಿದ್ದರಾಮಯ್ಯ ಬಿ ಎಸ್ ಯಡಿಯೂರಪ್ಪ 
ರಾಜ್ಯ

ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿಯವರು ಕಡ್ಲೆಪುರಿ‌ ತಿಂತಿದ್ರಾ, ಯಡಿಯೂರಪ್ಪಗೆ ಅರಳು ಮರುಳು: ಸಿದ್ದರಾಮಯ್ಯ

ಬಿ.ಎಸ್.ಯಡಿಯೂರಪ್ಪಗೆ ವಯಸ್ಸಿನಿಂದ ಅರಳು ಮರುಳಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪಗೆ ವಯಸ್ಸಿನಿಂದ ಅರಳು ಮರುಳಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿದ್ದಾರೆ. ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ತರಾತುರಿ ಟೆಂಡರ್ ಕರೆದು ಭ್ರಷ್ಟಾಚಾರ ನಡೆದಿದೆ ಎಂದು ಪತ್ರ ಬರೆದಿದ್ದಾರೆ. ಕಾಂಗ್ರೆಸ್​​ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ‌ ನಡೆಸಲಿ. ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿಯವರು ಕಡ್ಲೆಪುರಿ‌ ತಿಂತಿದ್ರಾ? ಸರ್ಕಾರ ಅಲ್ಪಾವಧಿಯಲ್ಲಿ ಟೆಂಡರ್​ ನೀಡುತ್ತಿರುವ ಉದ್ದೇಶ ಏನು? ಹಣ ನೀಡಿದವರಿಗೆ ಮಾತ್ರ ಬಿಲ್​ ಮಂಜೂರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ತರಾತುರಿ ಟೆಂಡರ್ ಕರೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಮಾಡಿದ್ದ ಆರೋಪಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು. ತಲೆ ತಿರುಕರು ಹೀಗೆ ಮಾತಾಡೋದು. ತಲೆ ಸರಿ ಇದ್ದವರು ಯಾರೂ ಕೂಡ ಈ ರೀತಿ ಮಾತಾಡಲ್ಲ. ಅಧಿಕಾರದ ಭ್ರಮೆಯಿಂದ ನಾವು ಅಧಿಕಾರಕ್ಕೆ ಬಂದೆ ಬಿಟ್ಟಿದ್ದೇವೆಂದು ಹೀಗೆ ಹುಚ್ಚುಚ್ಚಾಗಿ ಮಾತಾಡ್ತಿದ್ದಾರೆ. ಇವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದನ್ನು ಸದನದಲ್ಲಿ ಅವರು ಮಾತಾಡಲಿ. ಅದಕ್ಕೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ‌ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT