ಸಿದ್ದರಾಮಯ್ಯ ಬಿ ಎಸ್ ಯಡಿಯೂರಪ್ಪ 
ರಾಜ್ಯ

ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿಯವರು ಕಡ್ಲೆಪುರಿ‌ ತಿಂತಿದ್ರಾ, ಯಡಿಯೂರಪ್ಪಗೆ ಅರಳು ಮರುಳು: ಸಿದ್ದರಾಮಯ್ಯ

ಬಿ.ಎಸ್.ಯಡಿಯೂರಪ್ಪಗೆ ವಯಸ್ಸಿನಿಂದ ಅರಳು ಮರುಳಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಚಿತ್ರದುರ್ಗ: ಬಿ.ಎಸ್.ಯಡಿಯೂರಪ್ಪಗೆ ವಯಸ್ಸಿನಿಂದ ಅರಳು ಮರುಳಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. 

ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಪತ್ರ ಬರೆದಿದ್ದಾರೆ. ನೀರಾವರಿ ಯೋಜನೆ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ. ತರಾತುರಿ ಟೆಂಡರ್ ಕರೆದು ಭ್ರಷ್ಟಾಚಾರ ನಡೆದಿದೆ ಎಂದು ಪತ್ರ ಬರೆದಿದ್ದಾರೆ. ಕಾಂಗ್ರೆಸ್​​ ಆಡಳಿತದಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ‌ ನಡೆಸಲಿ. ನಮ್ಮ ಆಡಳಿತದ ಅವಧಿಯಲ್ಲಿ ಬಿಜೆಪಿಯವರು ಕಡ್ಲೆಪುರಿ‌ ತಿಂತಿದ್ರಾ? ಸರ್ಕಾರ ಅಲ್ಪಾವಧಿಯಲ್ಲಿ ಟೆಂಡರ್​ ನೀಡುತ್ತಿರುವ ಉದ್ದೇಶ ಏನು? ಹಣ ನೀಡಿದವರಿಗೆ ಮಾತ್ರ ಬಿಲ್​ ಮಂಜೂರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ತರಾತುರಿ ಟೆಂಡರ್ ಕರೆದ ಆರೋಪ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕರು ಮಾಡಿದ್ದ ಆರೋಪಕ್ಕೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು. ತಲೆ ತಿರುಕರು ಹೀಗೆ ಮಾತಾಡೋದು. ತಲೆ ಸರಿ ಇದ್ದವರು ಯಾರೂ ಕೂಡ ಈ ರೀತಿ ಮಾತಾಡಲ್ಲ. ಅಧಿಕಾರದ ಭ್ರಮೆಯಿಂದ ನಾವು ಅಧಿಕಾರಕ್ಕೆ ಬಂದೆ ಬಿಟ್ಟಿದ್ದೇವೆಂದು ಹೀಗೆ ಹುಚ್ಚುಚ್ಚಾಗಿ ಮಾತಾಡ್ತಿದ್ದಾರೆ. ಇವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದನ್ನು ಸದನದಲ್ಲಿ ಅವರು ಮಾತಾಡಲಿ. ಅದಕ್ಕೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ‌ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ