ಅಡಿಕೆ 
ರಾಜ್ಯ

ಅಡಿಕೆ ಆಮದಿನ ಕನಿಷ್ಠ ಬೆಲೆ 100 ರೂ. ಹಚ್ಚಳ; ಕೇಂದ್ರದ ನಿರ್ಧಾರಕ್ಕೆ CAMPCO ಸ್ವಾಗತ

ಮಂಗಳೂರು ಮೂಲದ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್ ಲಿಮಿಟೆಡ್ (CAMPCO) ಅಡಿಕೆ ಆಮದು ಕನಿಷ್ಠ ಬೆಲೆಯನ್ನು (ಎಂಐಪಿ) ಪ್ರತಿ ಕೆ.ಜಿ.ಗೆ ₹251ಯಿಂದ ₹351ಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. 

ಮಂಗಳೂರು: ಮಂಗಳೂರು ಮೂಲದ ಸೆಂಟ್ರಲ್ ಅರೆಕಾನಟ್ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋಆಪರೇಟಿವ್ ಲಿಮಿಟೆಡ್ (CAMPCO) ಅಡಿಕೆ ಆಮದು ಕನಿಷ್ಠ ಬೆಲೆಯನ್ನು (ಎಂಐಪಿ) ಪ್ರತಿ ಕೆ.ಜಿ.ಗೆ ₹251ಯಿಂದ ₹351ಕ್ಕೆ ಹೆಚ್ಚಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದೆ. 

ಬುಧವಾರ ಇಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ CAMPCO ಅಧ್ಯಕ್ಷ ಎ ಕಿಶೋರ್ ಕುಮಾರ್ ಕೊಡ್ಗಿ, ಈ ನಿರ್ಧಾರಕ್ಕಾಗಿ ಇಡೀ ಅಡಿಕೆ ಬಂಧುಗಳು ಕೇಂದ್ರಕ್ಕೆ ಕೃತಜ್ಞರಾಗಿದ್ದಾರೆ ಎಂದರು.

CAMPCO ಮತ್ತು ಇತರ ಸಮಾನ ಮನಸ್ಕ ಸಹಕಾರಿ ಸಂಸ್ಥೆಗಳಿಂದ ಕೃಷಿ ಮತ್ತು ವಾಣಿಜ್ಯ ಸಚಿವಾಲಯಗಳು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪುನರಾವರ್ತಿತ ಮನವಿಗಳ ಆಧಾರದ ಮೇಲೆ, ಕೇಂದ್ರವು ದೇಶೀಯ ಮಾರುಕಟ್ಟೆಯನ್ನು ಸ್ಥಿರಗೊಳಿಸಲು ಎಂಐಪಿಯನ್ನು ಪರಿಷ್ಕರಿಸಲು ನಿರ್ಧರಿಸಿದೆ ಎಂದು ಅವರು ಹೇಳಿದರು.

ಇತ್ತೀಚೆಗೆ ನಡೆದ CAMPCO ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಕೊಡ್ಗಿ ಅವರು ಅಡಿಕೆ ರೈತರ ಬೇಡಿಕೆಗೆ ಒತ್ತಾಯಿಸಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರಿಗೆ ಮನವಿ ಪತ್ರ ಸಲ್ಲಿಸಿದ್ದರು.

ಅಡಿಕೆಯ ಆಮದಿನ ಕನಿಷ್ಠ ದರವನ್ನು ಪ್ರತಿ ಕೆ.ಜಿ.ಗೆ ₹251ಯಿಂದ ₹351ಕ್ಕೆ ಹೆಚ್ಚಿಸಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ. ‘ಇನ್ಮುಂದೆ ಯಾವುದೇ ದೇಶದಿಂದ ಅಡಿಕೆ ಆಮದು ಮಾಡಿಕೊಂಡರೂ ಕೆ.ಜಿ.ಗೆ 351 ರೂ.ಗಿಂತ ಹೆಚ್ಚಿನ ಬೆಲೆ ಕೊಡಬೇಕಾಗಿದೆ‘ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಘೋಷಿಸಿದ್ದರು.

ಅಡಿಕೆಯ ಎಂಐಪಿಯನ್ನು 351 ರೂ.ಗೆ ಪರಿಷ್ಕರಿಸಲು ಶ್ರಮಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಎಲ್ಲಾ ಕೇಂದ್ರ ಮತ್ತು ರಾಜ್ಯ ಸಚಿವರು ಮತ್ತು ಸಹಕಾರಿಗಳ ಮುಖಂಡರಿಗೆ CAMPCO ಕಡೆಯಿಂದ ಹೃತ್ಪೂರ್ವಕವಾದ ಧನ್ಯವಾದಗಳು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ CAMPCO ಉಪಾಧ್ಯಕ್ಷ ಕೆ ಶಂಕರನಾರಾಯಣ ಭಟ್, ವ್ಯವಸ್ಥಾಪಕ ನಿರ್ದೇಶಕ ಎಚ್ ಎಂ ಕೃಷ್ಣಕುಮಾರ್ ಹಾಗೂ ಇತರ ನಿರ್ದೇಶಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT