ನಳೀನ್ ಕುಮಾರ್ ಕಟೀಲು 
ರಾಜ್ಯ

ಭಾರತ ರಾಮ ಭಕ್ತರಿಗೆ ಮಾತ್ರ: ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್

ಟಿಪ್ಪು ಸುಲ್ತಾನ್ ವಂಶಸ್ಥರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಅವರು, "ನಾವು ಶ್ರೀರಾಮ ಮತ್ತು ಹನುಮಂತನ ಭಕ್ತರು. ನಮ್ಮದು ಟಿಪ್ಪುವಿನ ಸಂತತಿಯಲ್ಲ. ಅವರ ವಂಶಸ್ಥರನ್ನು ನಾವು ವಾಪಸ್ ಕಳುಹಿಸುತ್ತೇವೆ ಎಂದರು.

ಕೊಪ್ಪಳ: ಟಿಪ್ಪು ಸುಲ್ತಾನ್ ವಂಶಸ್ಥರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಅವರು, "ನಾವು ಶ್ರೀರಾಮ ಮತ್ತು ಹನುಮಂತನ ಭಕ್ತರು. ನಮ್ಮದು ಟಿಪ್ಪುವಿನ ಸಂತತಿಯಲ್ಲ. ಅವರ ವಂಶಸ್ಥರನ್ನು ನಾವು ವಾಪಸ್ ಕಳುಹಿಸುತ್ತೇವೆ ಎಂದರು.

ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕಟೀಲ್, ಈ ರಾಜ್ಯಕ್ಕೆ ಟಿಪ್ಪು ಸಂತಾನ ಬೇಕಾ? ಅಥವಾ ಹನುಮಂತ, ಶ್ರೀರಾಮನ ಭಕ್ತರು ಬೇಕಾ? ಎಂಬ ಯೋಚನೆ ಮಾಡಿ ಯಲಬುರ್ಗಾ ಜನರನ್ನು ಕೇಳುತ್ತೇನೆ ಎಂದರು.

ನಾನು ಹನುಮಂತನ ನೆಲದಲ್ಲಿ ಸವಾಲು ಹಾಕುತ್ತೇನೆ -- ಟಿಪ್ಪುವನ್ನು ಪ್ರೀತಿಸುವ ಜನರು ಇಲ್ಲಿ ಉಳಿಯಬಾರದು. ಭಗವಾನ್ ರಾಮನ ಭಜನೆಗಳನ್ನು ಹಾಡುವ ಮತ್ತು ಭಗವಾನ್ ಹನುಮಂತನನ್ನು ಆಚರಿಸುವ ಜನರು ಮಾತ್ರ ಇಲ್ಲಿ ವಾಸಿಸಬೇಕು ಎಂದು ಕಟೀಲ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬಿಜೆಪಿಗೆ ಹನುಮಮಾಲೆ, ದತ್ತಮಾಲೆ ಮೇಲೆ ನಂಬಿಕೆ ಇದೆ. ಆದರೆ ಕಾಂಗ್ರೆಸ್‌ಗೆ ಟಿಪ್ಪು ಮಾಲೆ ಮೇಲೆ ನಂಬಿಕೆ ಇದೆ. ರಾಜ್ಯದ ಬೇರೆಡೆಯಂತೆ ಯಲಬುರ್ಗಾ ಕ್ಷೇತ್ರವೂ ಕಾಂಗ್ರೆಸ್ ಮುಕ್ತ ಆಗುತ್ತದೆ ಎಂದು ಗುಡುಗಿದರು.

ಈ ಹಿಂದೆ ರಸ್ತೆ, ಚರಂಡಿಯಂತಹ ಸಣ್ಣ ವಿಷಯಗಳ ಬಗ್ಗೆ ಮಾತನಾಡಬೇಡಿ. ಆದರೆ ಲವ್ ಜಿಹಾದ್‌ನಂತಹ ದೊಡ್ಡ ವಿಷಯಗಳ ಬಗ್ಗೆ ಮಾತನಾಡಿ ಎಂದು ಹೇಳುವ ಮೂಲಕ ಕಟೀಲ್ ಹೊಸ ವಿವಾದವನ್ನು ಹುಟ್ಟುಹಾಕಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT