ಪ್ರಾತಿನಿಧಿಕ ಚಿತ್ರ 
ರಾಜ್ಯ

ದಾವಣಗೆರೆ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತರೇ ಟ್ರಕ್ ಚಾಲಕರ ದರೋಡೆಯಲ್ಲಿ ತೊಡಗಿದ್ದರು!

ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಾವಣಗೆರೆ: ದಾವಣಗೆರೆ ನಗರದ ಬಳಿ ಮೂವರು ಯುವಕರನ್ನು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಸಂತ್ರಸ್ತರು ಟ್ರಕ್ ಚಾಲಕರನ್ನು ದರೋಡೆ ಮಾಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ ಮತ್ತು ಟ್ರಕ್ ಚಾಲಕರೊಬ್ಬರು ಹಿಟ್ ಅಂಡ್ ರನ್ ಮಾಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ದಾವಣಗೆರೆ ಗ್ರಾಮಾಂತರ ಪೊಲೀಸರು ಹಾಗೂ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಪ್ರಕರಣವನ್ನು ಭೇದಿಸಿ ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ. ಸಂತ್ರಸ್ತರ ಮೂವರು ಸಹಚರರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಮೃತರು ಆರು ಸದಸ್ಯರ ದರೋಡೆಕೋರರ ತಂಡದ ಭಾಗವಾಗಿದ್ದರು. ಲಾರಿ ಚಾಲಕರನ್ನು ದರೋಡೆ ಮಾಡಲು ಎರಡು ಬೈಕ್‌ಗಳಲ್ಲಿ ಹೋಗಿದ್ದರು. ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಂತು ಅಪರಾಧ ಕೃತ್ಯ ಎಸಗುತ್ತಿದ್ದರು.
ಮೂವರು ದರೋಡೆಕೋರರನ್ನು ಕೊಂದ ಟ್ರಕ್ ಚಾಲಕನನ್ನು ಉತ್ತರ ಪ್ರದೇಶದ ಭೋಲೆ ಯಾದವ್ ಎಂದು ಗುರುತಿಸಲಾಗಿದೆ. ತಮಿಳುನಾಡಿನ ಚೆನ್ನೈನಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ದರೋಡೆ ತಂಡದ ಭಾಗವಾಗಿದ್ದ ಮೃತ ವ್ಯಕ್ತಿಗಳ ಸಹಚರರಾದ ನಾಗರಾಜ್, ಗಣೇಶ್ ಮತ್ತು ರಾಹುಲ್ ಎಂಬುವವರನ್ನು ಬಂಧಿಸಲಾಗಿದೆ. ಘಟನೆ ನಡೆದಾಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೇ ಟ್ರಕ್ ಚಾಲಕನಿಂದ ಅಪಾಯದಿಂದ ಪಾರಾಗುವಲ್ಲಿ ಯಶಸ್ವಿಯಾಗಿದ್ದರು. ಘಟನೆ ನಂತರ ಅವರೂ ತಲೆಮರೆಸಿಕೊಂಡಿದ್ದರು.

ಮೃತರು ಟ್ರಕ್ ಚಾಲಕ ಭೋಲೆ ಯಾದವ್‌ಗೆ ಬೆದರಿಕೆ, ಹಲ್ಲೆ ನಡೆಸಿದ್ದಾರೆ. 8 ಸಾವಿರ ಸುಲಿಗೆ ಮಾಡಿ ಮೊಬೈಲ್ ಮತ್ತಿತರ ವಸ್ತುಗಳನ್ನು ದೋಚಿದ್ದಾರೆ. ಈ ಘಟನೆಯಿಂದ ಕುಪಿತಗೊಂಡ ಆರೋಪಿ ಟ್ರಕ್ ಚಾಲಕ ಎರಡು ಬೈಕ್‌ಗಳಲ್ಲಿ ತೆರಳುತ್ತಿದ್ದ ದರೋಡೆಕೋರರ ತಂಡವನ್ನು ಹಿಂಬಾಲಿಸಿ, ಒಂದು ಬೈಕ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಟ್ ಅಂಡ್ ರನ್ ಪ್ರಕರಣ ಶನಿವಾರ (ಫೆಬ್ರುವರಿ 10) ಬೆಳಕಿಗೆ ಬಂದಿತ್ತು. ಅನಗೋಡ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಘಟನೆ ನಡೆದಿದೆ. ದಾವಣಗೆರೆ ಸಮೀಪದ ರಾಮನಗರ ನಿವಾಸಿಗಳಾದ 24 ವರ್ಷದ ಪರಶುರಾಮ್, 23 ವರ್ಷದ ಸಂದೇಶ್ ಮತ್ತು 26 ವರ್ಷದ ಶಿವು ಸ್ಥಳದಲ್ಲೇ ಮೃತಪಟ್ಟಿದ್ದರು.

ಇದಕ್ಕೂ ಮುನ್ನ ಯುವಕರು ಕಾಟಿಹಳ್ಳಿ ಗ್ರಾಮಕ್ಕೆ ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳಿ, ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದರು ಎಂದು ಕುಟುಂಬಸ್ಥರು ಸಮರ್ಥಿಸಿಕೊಂಡಿದ್ದರು.

ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳು ಮತ್ತು ಜನರ ಹೇಳಿಕೆಗಳನ್ನು ಸಹ ಸಂಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಚೇರಿಯಲ್ಲಿ ಐಟಿ ಶೋಧ ನಡೆಯುತ್ತಿದ್ದಾಗಲೇ ಶೂಟ್ ಮಾಡಿಕೊಂಡ ಸಿ.ಜೆ ರಾಯ್; ಪೊಲೀಸ್ ಆಯುಕ್ತರು ಹೇಳಿದ್ದೇನು?

12 ರೋಲ್ಸ್ ರಾಯ್ಸ್‌ ಸೇರಿ ಹಲವು ಐಷಾರಾಮಿ ಕಾರು, ಸಾವಿರಾರು ಕೋಟಿ ಒಡೆಯ ಸಿಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಮಹಾರಾಷ್ಟ್ರದ ನೂತನ ಉಪ ಮುಖ್ಯಮಂತ್ರಿಯಾಗಿ ಸುನೇತ್ರ ಪವಾರ್ ನಾಳೆ ಪ್ರಮಾಣ ವಚನ ಸ್ವೀಕಾರ: ಭುಜಬಲ್

BIFF ನಲ್ಲಿ ಪ್ಯಾಲೆಸ್ತೀನ್ ಚಿತ್ರಗಳ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಒತ್ತಾಯ: ಬಿಜೆಪಿ ವಾಗ್ದಾಳಿ!

News headlines 30-01-2026 | ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ ರಾಯ್ ಆತ್ಮಹತ್ಯೆ; ದಾಳಿ: 4 ಲಕ್ಷ ಲಂಚ ಪಡೆಯುತ್ತಿದ್ದ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ; ಬಂಧನದ ಬಳಿಕ ಹೈಡ್ರಾಮ; ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯ

SCROLL FOR NEXT