ಸಾಂದರ್ಭಿಕ ಚಿತ್ರ 
ರಾಜ್ಯ

ನಾಳೆ ಮಹಾ ಶಿವರಾತ್ರಿ: ಅಳಂದ ಪಟ್ಟಣದಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ನಾಳೆ ಶಿವರಾತ್ರಿ ಆಚರಣೆ, ಅದೇ ಹೊತ್ತಿಗೆ ಮುಸಲ್ಮಾನರ ಪವಿತ್ರ ಹಬ್ಬ ಉರುಸ್ ಆಚರಣೆ ಕೂಡ ಇದೆ. ಈ ಹಿನ್ನೆಲೆಯಲ್ಲಿ ಕಲಬುರಗಿಯ ಲಾಡಲ್ ಮಶಾಕ್ ದರ್ಗಾ ಮತ್ತು ರಾಘವ ಚೈತನ್ಯ ಶಿವಲಿಂಗದ ಉರುಸ್ ಮತ್ತು ಆಳಂದದ ಲಾಡ್ಲ್ ಮಶಾಕ್ ದರ್ಗಾದ ಒಳಗಿನ ಮಹಾಶಿವರಾತ್ರಿಗೆ ಹೆಚ್ಚುವರಿ ಭದ್ರತೆ ನೀಡಲಾಗಿದೆ. 

ಕಲಬುರಗಿ: ನಾಳೆ ಶಿವರಾತ್ರಿ ಆಚರಣೆ, ಅದೇ ಹೊತ್ತಿಗೆ ಮುಸಲ್ಮಾನರ ಪವಿತ್ರ ಹಬ್ಬ ಉರುಸ್ ಆಚರಣೆ ಕೂಡ ಇದೆ. ಈ ಹಿನ್ನೆಲೆಯಲ್ಲಿ ಕಲಬುರಗಿಯ ಲಾಡಲ್ ಮಶಾಕ್ ದರ್ಗಾ ಮತ್ತು ರಾಘವ ಚೈತನ್ಯ ಶಿವಲಿಂಗದ ಉರುಸ್ ಮತ್ತು ಆಳಂದದ ಲಾಡ್ಲ್ ಮಶಾಕ್ ದರ್ಗಾದ ಒಳಗಿನ ಮಹಾಶಿವರಾತ್ರಿಗೆ ಹೆಚ್ಚುವರಿ ಭದ್ರತೆ ನೀಡಲಾಗಿದೆ. 

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ ) ನೇತೃತ್ವದಲ್ಲಿ ಪೊಲೀಸರು ಮಾರ್ಗ ಮೆರವಣಿಗೆ ನಡೆಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ನಿನ್ನೆ ಬೆಳಗ್ಗೆ ಆಳಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಲೋಕ್ ಕುಮಾರ್ ಸಂಚಾರ ನಡೆಸಿದರು. 

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಅಲೋಕ್ ಕುಮಾರ್, ಫೆಬ್ರವರಿ 18 ರಂದು ಆಳಂದ ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 11 ಕೆಎಸ್‌ಆರ್‌ಪಿ ಪ್ಲಟೂನ್‌ಗಳು ಸೇರಿದಂತೆ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗುವುದು. ಆಳಂದ ಮತ್ತು ಸುತ್ತಮುತ್ತ ಒಟ್ಟು 11 ಪೊಲೀಸ್ ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗುವುದು ಎಂದರು. ಫೆಬ್ರವರಿ 18 ರಂದು ಆಳಂದ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆಯೇ ಎಂಬ ಪ್ರಶ್ನೆಗೆ, ಅಲೋಕ್ ಕುಮಾರ್ ಅವರು ಈ ವಿಷಯವನ್ನು ಜಿಲ್ಲಾಡಳಿತ ನಿರ್ಧರಿಸುತ್ತದೆ ಎಂದು ಹೇಳಿದರು.

ಎಡಿಜಿಪಿ ಅಲೋಕ್ ಕುಮಾರ್, ಈಶಾನ್ಯ ವಲಯದ ಡಿಐಜಿ ಅನುಪಮ್ ಅಗರ್ವಾಲ್, ಕೆಎಸ್‌ಆರ್‌ಪಿ ಕಮಾಂಡೆಂಟ್ ಬಸವರಾಜ್ ಜಿಲ್ಲೆ ಮತ್ತು ಎಸ್‌ಪಿ ಇಶಾ ಪಂತ್ ಲಾಡಲ್ ಮಶಾಕ್ ದರ್ಗಾ ಮತ್ತು ರಾಘವ ಚೈತನ್ಯ ಶಿವಲಿಂಗಕ್ಕೆ ಭೇಟಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್