ಸಾಂದರ್ಭಿಕ ಚಿತ್ರ 
ರಾಜ್ಯ

ಯಾದಗಿರಿ: ಕಾರು - ಲಾರಿ ಮುಖಾಮುಖಿ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ ತಾಲೂಕಿನ ಸೈದಾಪುರ ಬಳಿ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ  ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಾದಗಿರಿ: ಯಾದಗಿರಿ ತಾಲೂಕಿನ ಸೈದಾಪುರ ಬಳಿ ಶುಕ್ರವಾರ ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ  ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಸಂಜೆ ಸೈದಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ತೆಲಂಗಾಣದ ಗದ್ವಾಲ್ ಮೂಲದ ಸೈಫುಲ್ಲಾ (40) ಹಾಗೂ ಜ್ಞಾನೇಶ್ವರ(35) ಮೃತ ದುರ್ದೈವಿಗಳು.

ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಸೈಫುಲ್ಲಾ ಹಾಗೂ ಜ್ಞಾನೇಶ್ವರ ಇಬ್ಬರೂ ಗದ್ವಾಲ್‌ನಿಂದ ಕಲಬುರಗಿಗೆ ಸೀರೆ ವ್ಯಾಪಾರಕ್ಕೆ ಹೊರಟಿದ್ದರು. ಇನ್ನು ಲಾರಿ ಕಲಬುರಗಿಯಿಂದ ತಮಿಳುನಾಡಿಗೆ ಹೋಗುತ್ತಿತ್ತು ಎನ್ನಲಾಗಿದೆ.

ಸ್ಥಳಕ್ಕೆ‌ ಸೈದಾಪುರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತ.ನಾಡು ಸಿಎಂ ವಿಜಯ್ ಗೆ ಮೊದಲ ಆಘಾತ; ಒಂದು ಮತದ ಅಂತರದಿಂದ ಗೆದ್ದಿದ್ದ TVK ಶಾಸಕನಿಗೆ ವಿಶ್ವಾಸಮತ ಪ್ರಕ್ರಿಯೆಗೆ ನಿರ್ಬಂಧ!

ತಮಿಳುನಾಡು: ಸ್ಪೀಕರ್ ಆಗಿ ಜೆ.ಸಿ.ಡಿ ಪ್ರಭಾಕರ್ ಅವಿರೋಧವಾಗಿ ಆಯ್ಕೆ, ನಾಳೆ ವಿಜಯ್ ಗೆ ಅಗ್ನಿಪರೀಕ್ಷೆ, AIADMK ಷಣ್ಮುಗಂ ಬಣ ಬೆಂಬಲ!

ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಜಲಕಂಟಕ : ಕೋಡಿಮಠದ ಶ್ರೀ ಸ್ಫೋಟಕ ಭವಿಷ್ಯ!

ಕೇರಳ ಸಿಎಂ ಬಿಕ್ಕಟ್ಟು: ವರಿಷ್ಠರೊಂದಿಗೆ ಮಾತುಕತೆಗಾಗಿ ದೆಹಲಿಗೆ ತೆರಳಿದ ಕೆ. ಸುಧಾಕರನ್, ಇಂದು ಅಂತಿಮ ನಿರ್ಧಾರ ಸಾಧ್ಯತೆ

'ಬಿಜೆಪಿ ನಾಯಕರು ಬುಟ್ಟಿಯೊಳಗಿನ ಏಡಿಗಳಂತೆ: BJP ಮತ್ತು ವಿಶ್ವಾಸ ದ್ರೋಹ ರಕ್ತ ಸಂಬಂಧಿಗಳು; ಮೋದಿಯದ್ದು ಢೋಂಗಿ ಬುದ್ದಿ'

SCROLL FOR NEXT