ಯುವಕರ ಹತ್ಯೆ 
ರಾಜ್ಯ

ದೊಡ್ಡಬಳ್ಳಾಪುರ: ಕ್ರಿಕೆಟ್ ಟೂರ್ನಿ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಇಬ್ಬರಿಗೆ ಚೂರಿ ಇರಿದು ಬರ್ಬರ ಹತ್ಯೆ

ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಆಡುವಾಗ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. 

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಆಡುವಾಗ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಭರತ್, ಪ್ರತೀಕ್ ಎಂದು ಗುರುತಿಸಲಾಗಿದೆ.  

ಬಿಜೆಪಿ ಮುಖಂಡ ಧೀರಜ್​ ಅವರು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದು, ಈ ವೇಳೆ ನಡೆದ ಜಗಳದಲ್ಲಿ ಭರತ್, ಪ್ರತೀಕ್​ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕೊಲೆ ನಂತರ ಆರೋಪಿಗಳು ಪರಾರಿಯಾಗಿದ್ದಾರೆ.

ಟೂರ್ನಿ ವೇಳೆ ಮೈದಾನದಲ್ಲಿ ಕಾರು ನಿಲ್ಲಿಸಿದ್ದನ್ನು ಭರತ್ ಹಾಗೂ ಪ್ರತೀಕ್ ಪ್ರಶ್ನಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ವೇಳೆ ಗ್ರಾಮಸ್ಥರು ಇತರೆ ಆಟಗಾರರು ಜಗಳ ಬಿಡಿಸಿದ್ದರು. 

ನಂತರ ಭರತ್, ಪ್ರತೀಕ್ ಬಸ್​ ಸ್ಟ್ಯಾಂಡ್​ಗೆ ಬಂದಾಗ ಅಲ್ಲಿಗೆ ಬಂದ ಗುಂಪೊಂದು ಇಬ್ಬರನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಘಟನೆ ನಂತರ ಸ್ಥಳ ಉದ್ವಿಗ್ನಗೊಂಡಿದ್ದು ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದರು. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz closure: ಹಾರ್ಮುಜ್ ಜಲಸಂಧಿ ಬಂದ್, ಏಷ್ಯಾದ ಬಂದರುಗಳಲ್ಲಿ ಕ್ಯೂನಲ್ಲಿ ನಿಂತ ಹಡಗುಗಳು!

ಪದೇ ಪದೇ ಇರಾನ್ ದಾಳಿ: ಅಬುದಾಬಿಯಲ್ಲಿ ಕ್ಷಿಪಣಿ ಅವಶೇಷಗಳು ಬಿದ್ದು, ಭಾರತೀಯ ಪ್ರಜೆ ಸೇರಿದಂತೆ ಇಬ್ಬರು ಸಾವು!

ರಾಜ್ಯ ಸರ್ಕಾರ ನಿಯಮದ ಮಿತಿಯೊಳಗೆ ಸಾಲ ಮಾಡಿದೆ: ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಕಣದಲ್ಲಿ 34 ಅಭ್ಯರ್ಥಿಗಳು, 80 ಲಕ್ಷ ನಗದು, 1.74 ಲಕ್ಷ ರೂ. ಮೌಲ್ಯದ ಮದ್ಯ ವಶಕ್ಕೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಕಾಮಕಾಂಡ: ಸಚಿವ ನರಹರಿ ಜಿರ್ವಾಲ್ 'ಅಶ್ಲೀಲ ವಿಡಿಯೋ' ವೈರಲ್!

SCROLL FOR NEXT