ರಾಮಲಿಂಗಾ ರೆಡ್ಡಿ 
ರಾಜ್ಯ

ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ನೀವೆಲ್ಲೇ ಹೋದರೂ ಪ್ರತಿಭಟನೆ: ಸಿಎಂ ಬೊಮ್ಮಾಯಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಮುಂದಿನ 15 ದಿನಗಳ ಒಳಗಾಗಿ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಎಲ್ಲಿಯೇ ಹೋದರೂ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು: ಮುಂದಿನ 15 ದಿನಗಳ ಒಳಗಾಗಿ ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಎಲ್ಲಿಯೇ ಹೋದರೂ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿಯವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಶನಿವಾರ ಎಚ್ಚರಿಕೆ ನೀಡಿದ್ದಾರೆ.

ಈಜಿಪುರ ಜಂಕ್ಷನ್ ನಿಂದ ಮಡಿವಾಳ ಕೇಂದ್ರೀಯ ಸದನದವರೆಗೂ ಮೇಲ್ ಸೇತುವೆ ರಸ್ತೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಕೆಪಿಸಿಸಿ ಕಾರ್ಯಧ್ಯಕ್ಷ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಕೋರಮಂಗಲದಲ್ಲಿ ನಿನ್ನೆ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ನೂರಾರು ನಿವಾಸಿಗಳು ಮತ್ತು ಕಾರ್ಯಕರ್ತರು ಸೋನಿ ವರ್ಲ್ಡ್ ಸಿಗ್ನಲ್‌ನಲ್ಲಿ ಜಮಾಯಿಸಿದರು. ಇದರಿಂದಾಗಿ ಕೆಲ ಕಾಲ ಸಂಚಾರ ದಟ್ಟಣೆ ಸಮಸ್ಯೆ ಎದುರಾಗಿತ್ತು.

ದಕ್ಷಿಣ ಮತ್ತು ಪೂರ್ವ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಈಜಿಪುರದಿಂದ ಕೇಂದ್ರೀಯ ಸದನದವರೆಗಿನ ಮೇಲ್ಸೇತುವೆ ಜನರಿಗೆ ಅತ್ಯಗತ್ಯವಾಗಿದೆ.ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ಯೋಜನೆಗೆ ಚಾಲನೆ ನೀಡಲಾಗಿದ್ದು, ಶೇ.32ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಯಾವುದೇ ಪ್ರಗತಿಯಾಗಿಲ್ಲ. ಶೀಘ್ರದಲ್ಲಿಯೇ ಯೋಜನೆ ಕಾರ್ಯಗತಗೊಳಿಸುವಂತೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಮಂಜುನಾಥ್ ಪ್ರಸಾದ್, ಅನಿಲ್ ಕುಮಾರ್, ಗೌರವ್ ಗುಪ್ತಾ ಸೇರಿದಂತೆ ಬಿಬಿಎಂಪಿ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಲಾಗಿತ್ತು. ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರನ್ನೂ ಭೇಟಿ ಮಾಡಲಾಗಿದೆ.

ಬಿಬಿಎಂಪಿ ಅಥವಾ ಸರ್ಕಾರ ಕರ್ನಾಟಕ ರೂರಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಲಿಮಿಟೆಡ್ ಮೂಲಕ ಯೋಜನೆಯನ್ನು ಕಾರ್ಯಗತಗೊಳಿಸಬೇಕು ಎಂದು ರಾಮಲಿಂಗಾ ರೆಡ್ಡಿಯವರು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ಕೋರಮಂಗಲ ನಿವಾಸಿ ಹಾಗೂ ಸಿಟಿಜನ್ ಆ್ಯಕ್ಷನ್ ಫೋರಂ ಸದಸ್ಯ ನಿತಿನ್ ಶೇಷಾದ್ರಿ ಭಾಗವಹಿಸಿದ್ದರು.

‘ಎಲಿವೇಟೆಡ್ ರಸ್ತೆ ಯೋಜನೆ ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದೆ, ಕಾಮಗಾರಿ ತಡವಾಗುತ್ತಿರುವುದಕ್ಕೆ ಹಲವು ಕಾರಣಗಳನ್ನು ನೀಡಲಾಗುತ್ತಿದೆ. ಆದರೆ, ಇದಕ್ಕೆ ಇರುವ ಪ್ರಮುಖ ಕಾರಣ ಇಚ್ಛಾಶಕ್ತಿಯ ಕೊರತೆಯಾಗಿದೆ ಎಂದು ಶೇಷಾದ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!