ನಾಗರಿಕರ ಪ್ರತಿಭಟನೆ 
ರಾಜ್ಯ

ಬೆಂಗಳೂರು: ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ನಾಗರಿಕರ ಪ್ರತಿಭಟನೆ ಮುಂದುವರಿಕೆ 

ಸ್ಯಾಂಕಿ ರಸ್ತೆಯಲ್ ಮೇಲ್ಸೇತುವೆ ನಿರ್ಮಾಣ ಹಾಗೂ ರಸ್ತೆ ವಿಸ್ತರಣೆಯನ್ನು ವಿರೋಧಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಸೇರಿದಂತೆ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ನಿವಾಸಿಗಳು, ಭಾನುವಾರ ಕಪ್ಪು ಬಟ್ಟೆ ಧರಿಸಿ, ಕೆರೆಯೊಂದಿಗೆ ಸೆಲ್ಫಿ ತೆಗೆದು 'ಸ್ಯಾಂಕಿ ಉಳಿಸಿ' ಹ್ಯಾಷ್ ಟ್ಯಾಗ್ ನೊಂದಿಗೆ ಸಾಮಾಜಿಕ  ಜಾಲತಾಣಗಳಲ್ಲಿ ಫೋಸ್ಟ್  ಮಾಡಿದರು.ಿ

ಬೆಂಗಳೂರು: ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಾಣ ಹಾಗೂ ರಸ್ತೆ ವಿಸ್ತರಣೆಯನ್ನು ವಿರೋಧಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಸೇರಿದಂತೆ ವಿವಿಧ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ನಿವಾಸಿಗಳು, ಭಾನುವಾರ ಕಪ್ಪು ಬಟ್ಟೆ ಧರಿಸಿ, ಕೆರೆಯೊಂದಿಗೆ ಸೆಲ್ಫಿ ತೆಗೆದು 'ಸ್ಯಾಂಕಿ ಉಳಿಸಿ' ಹ್ಯಾಷ್ ಟ್ಯಾಗ್ ನೊಂದಿಗೆ ಸಾಮಾಜಿಕ  ಜಾಲತಾಣಗಳಲ್ಲಿ ಫೋಸ್ಟ್  ಮಾಡಿದರು.

ಫ್ಲೈಓವರ್ ಟ್ರಾಫಿಕ್ ಸಮಸ್ಯೆ ಪರಿಹರಿಸುವುದಿಲ್ಲ ಮತ್ತು ಸ್ಯಾಂಕಿ ಕೆರೆ ಉದ್ದಕ್ಕೂ ಇರುವ ಮರಗಳನ್ನು ಮಾತ್ರ ನಾಶಪಡಿಸುತ್ತದೆ ಎಂದು ಪ್ರತಿಭಟನಾಕಾರರು ಆತಂಕ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ನೂರಾರು ನಾಗರಿಕರಲ್ಲಿ ಮಕ್ಕಳೂ ಸಹ ಕಪ್ಪು ಬಟ್ಟೆ ಧರಿಸಿ ಒಗ್ಗಟ್ಟು ಪ್ರದರ್ಶಿಸಿದರು. ಅವರು ಮುಂಜಾನೆ ಸ್ಯಾಂಕಿ ಕೆರೆಯಿಂದ  ಸ್ಯಾಂಕಿ ಟ್ಯಾಂಕ್ ಉದ್ದಕ್ಕೂ ನಡೆದು, ಮೇಲ್ಸೇತುವೆ ನಿರ್ಮಾಣದ ವಿರುದ್ಧ  ಪ್ರತಿಭಟಿಸಿದರು.

ಮಲ್ಲೇಶ್ವರಂ ನಿವಾಸಿ, ನಟಿ- ಗಾಯಕಿ ವಸುಂಧರಾ ದಾಸ್ ಕೂಡಾ ಪ್ರತಿಭಟನೆಯಲ್ಲಿ ಭಾಗವಹಿಸಿದರು. ಮೇಲ್ಸೇತುವೆ ನಿರ್ಮಾಣಕ್ಕಾಗಿ ಅನೇಕ ಮರಗಳನ್ನು ಕಡಿಯಬೇಕಾಗುತ್ತದೆ. ಇದಕ್ಕೆ ಇಲ್ಲಿನ ನಿವಾಸಿಗಳ ವಿರೋಧವಿದೆ ಎಂದು  ವಸುಂಧರಾ ದಾಸ್ ಹೇಳಿದರು. 

ಬಿಬಿಬಿಎಂಪಿ ಮತ್ತಿತರ ಆಡಳಿತ ನಿರ್ಣಯ ಕೈಗೊಳ್ಳುವವರು ಸಾರ್ವಜನಿಕರೊಂದಿಗೆ ಸರಣಿ ಸಮಾಲೋಚನೆ ನಡೆಸಿ, ಜನರ ಹಿತರಕ್ಷಣೆ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಮೇಲ್ಸೇತುವೆ ನಿರ್ಮಾಣಕ್ಕೆ ಬದಲಿಗೆ ಪರ್ಯಾಯ ಮಾರ್ಗ ಕಂಡುಕೊಳ್ಳುವಂತೆ ನಿವಾಸಿಗಳು ಒತ್ತಾಯಿಸಿದರು. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT