ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ 
ರಾಜ್ಯ

ಕಾಡ್ಗಿಚ್ಚು ತಡೆಗೆ ಅಗತ್ಯ ರಕ್ಷಣಾ ಸೌಲಭ್ಯ ಕೊಡದೆ ಗಾರ್ಡ್ ಸಾವಿಗೆ ರಾಜ್ಯ ಸರ್ಕಾರವೇ ಕಾರಣ- ಜೆಡಿಎಸ್ ಆರೋಪ

ಸಕಲೇಶಪುರ ತಾಲೂಕಿನ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಬೆಂಕಿ ನಂದಿಸಲು ಹೋಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಮೃತಪಟ್ಟಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಜೆಡಿಎಸ್ ಆರೋಪಿಸಿದೆ. 

ಬೆಂಗಳೂರು: ಸಕಲೇಶಪುರ ತಾಲೂಕಿನ ರಣಭಿಕ್ತಿ ರಕ್ಷಿತಾರಣ್ಯದಲ್ಲಿ ಬೆಂಕಿ ನಂದಿಸಲು ಹೋಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಮೃತಪಟ್ಟಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಜೆಡಿಎಸ್ ಆರೋಪಿಸಿದೆ. 

ಈ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್,  ಅರಣ್ಯ ಕಾವಲುಗಾರರಿಗೆ ಮೂರ್ನಾಲ್ಕು ತಿಂಗಳಿಂದ ಸಂಬಳ ಸಿಗದಿರುವ ಸಂಗತಿಯ ಬೆನ್ನಲ್ಲೆ ಈ ಸಾವು ಸಂಭವಿಸಿದೆ. ಘಟನೆಯಲ್ಲಿ ಫಾರೆಸ್ಟರ್ ಮಂಜುನಾಥ್  ತೀವ್ರವಾಗಿ ಗಾಯಗೊಂಡು,ಗಂಭೀರ ಸ್ಥಿತಿಯಲ್ಲಿದ್ದಾರೆ. ಬೇಸಿಗೆ ಕಾಲದಲ್ಲಿ ಕಾಡ್ಗಿಚ್ಚು ಸಮಸ್ಯೆ ಬಿಗಡಾಯಿಸುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತರೀತಿ ಸಜ್ಜಾಗಬೇಕಲ್ಲವೆ? ಎಂದು ಕೇಳಿದೆ.

ಅರಣ್ಯ ಸಂರಕ್ಷಣೆಗಾಗಿ ಹಗಲಿರುಳು ದುಡಿಯುವ ಕಾವಲುಗಾರರಿಗೆ ಹಲವು ತಿಂಗಳಿಂದ ಸಂಬಳವೇ ಪಾವತಿಯಾಗಿಲ್ಲ. ಸಂಬಳ ಸಿಗದೆ ಕೆಲಸಕ್ಕೆ ಹಾಜರಾಗಲು ಸಾಧ್ಯವಿಲ್ಲ ಎಂದು ಕಾವಲುಗಾರರು ವೃತ್ತಿಗೆ ಹಾಜರಾಗದಿರಲು ನಿರ್ಧರಿಸಿದ್ದರು. ಇದೇ ಸಂದರ್ಭದಲ್ಲಿ ಇಂತಹ ದುರ್ಘಟನೆ ನಡೆದಿದೆ. ಕಾಡ್ಗಿಚ್ಚು ತಡೆಗೆ ಅಗತ್ಯ ರಕ್ಷಣೆಯ ಸೌಲಭ್ಯಗಳನ್ನು ಕೊಡದೆ ಕಾವಲುಗಾರರ ಸಾವಿಗೆ ಕಾರಣವಾಗುವುದು ಯಾವ ಸೀಮೆಯ ಆಡಳಿತ? ಎಂದು ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT