ಸಂಗ್ರಹ ಚಿತ್ರ 
ರಾಜ್ಯ

ಅಂಧ ಚಿರತೆ ಮರಿಯ ರಕ್ಷಣೆ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನೆ

ಅಂಧ ಹೆಣ್ಣು ಚಿರತೆ ಮರಿಯೊಂದನ್ನು ರಕ್ಷಣೆ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಚಿಕಿತ್ಸೆ ಮತ್ತು ಪುನರ್ವಸತಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಬೆಂಗಳೂರು: ಅಂಧ ಹೆಣ್ಣು ಚಿರತೆ ಮರಿಯೊಂದನ್ನು ರಕ್ಷಣೆ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಚಿಕಿತ್ಸೆ ಮತ್ತು ಪುನರ್ವಸತಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ನೆಲಮಂಗಲ ವ್ಯಾಪ್ತಿಯ ಲಖನಹಳ್ಳಿ ಗ್ರಾಮದಲ್ಲಿ ಸುಮಾರು 6-7 ತಿಂಗಳ ವಯಸ್ಸಿನ ಮರಿ ಚಿರತೆಯನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಗುರುವಾರ ತಡರಾತ್ರಿ ಚಿರತೆ ಕಂಡ ಸ್ಥಳೀಯರು ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಹೋದಾಗ ಚಿರತೆ ಕಾಣಿಸಲಿಲ್ಲ. ಶುಕ್ರವಾರ ಬೆಳಿಗ್ಗೆ, ಸಿಬ್ಬಂದಿ ಗಸ್ತು ತಿರುಗಲು ಸ್ಥಳಕ್ಕೆ ಮರಳಿದ್ದರು. ಈ ವೇಳೆ ಪೊದೆಯೊಂದರಲ್ಲಿ ಚಿರತೆಯ ಬಾಲ ಆಡಿಸುತ್ತಿರುವುದು ಕಂಡು ಬಂದಿತ್ತು. ನಂತರ ಚಿರತೆಯನ್ನು ಶಾಂತಗೊಳಿಸಿ ಸೆರೆ ಹಿಡಿಯಲಾಯಿತು.

ಚಿರತೆ ಮರಿಯನ್ನ ಪರೀಕ್ಷೆ ಮಾಡಿದ ಪಶುವೈದ್ಯರಿಗೆ ಚಿರತೆಗೆ ಎರಡೂ ಕಣ್ಣುಗಳು ಇರದಿರುವುದು ಕಂಡು ಬಂದಿದೆ. ಹುಟ್ಟಿನಿಂದಲೇ ಚಿರತೆ ಕುರುಡಾಗಿದ್ದು, ಬಲಭಾಗದ ಹಿಂಗಾಲು ಮತ್ತು ಬಾಲ ಮುರಿತಗೊಂಡಿದೆ. ಇದೀಗ ಚಿರತೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದೆ. 6 ತಿಂಗಳ ಚಿರತೆ ಮರಿಯನ್ನು ಬೇಟೆಯಾಜಲು ಸಾಧ್ಯವಿಲ್ಲ.

ಚಿರತೆ ತಾಯಿಯಿಂದ ಹಾಲು ಕುಡಿದಂತೆ ತೋರುತ್ತಿದೆ. ಇದೀಗ ತಾಯಿ ಚಿರತೆಗಾಗಿ ಸೆರೆಹಿಡಿಯಲು ಬೋನ್ ಗಳನ್ನು ಇರಿಸಲಾಗಿದೆ. ಶನಿವಾರದವರೆಗೆ ಚಿರತೆಯ ಚಲನವಲನಗಳು ಕಂಡು ಬಂದಿಲ್ಲ. ಮರಿ ಚಿರತೆ ಕಂಡು ಬಂದ ಸ್ಥಳದಲ್ಲಿ 10 ದಿನಗಳ ಹಿಂದೆ ಮೇಕೆಯ ಶವವೊಂದು ಪತ್ತೆಯಾಗಿತ್ತು ಎಂದು ಅರಣ್ಯ ಸಿಬ್ಬಂದಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT