ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನೆರೆಹೊರೆಯವರ ಮುಂದೆ ಕೂಗಾಡಿದ ಕುಡುಕ ತಂದೆಯ ಹತ್ಯೆಗೈದ ಪುತ್ರ

ನೆರೆಹೊರೆಯವರ ಮುಂದೆ ಕುಟುಂಬಸ್ಥರ ಮೇಲೆ ಕೂಗಾಡಿದ ಕುಡಕ ತಂದೆಯನ್ನು ಪುತ್ರನೊಬ್ಬ ಹತ್ಯೆ ಮಾಡಿರುವ ಘಟನೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.

ಗದಗ: ನೆರೆಹೊರೆಯವರ ಮುಂದೆ ಕುಟುಂಬಸ್ಥರ ಮೇಲೆ ಕೂಗಾಡಿದ ಕುಡಕ ತಂದೆಯನ್ನು ಪುತ್ರನೊಬ್ಬ ಹತ್ಯೆ ಮಾಡಿರುವ ಘಟನೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.

ಮಲಕಸಾಬ್ ಕಾಳೇಖಾನ್ (40) ಮೃತ ವ್ಯಕ್ತಿಯಾಗಿದ್ದಾರೆ. ಮೌಲಾಸಾಬ್ ಕಾಳೇಖಾನ್ ತಂದೆಯನ್ನು ಹತ್ಯೆ ಮಾಡಿದ ವ್ಯಕ್ತಿಯಾಗಿದ್ದಾರೆ.

ಫೆಬ್ರವರಿ 16ರ ರಾತ್ರಿ 10 ಗಂಟೆ ಸುಮಾರಿಗೆ ಮಲಕಸಾಬ್ ಕಾಳೇಖಾನ್ ಕುಡಿದು ಮನೆಗೆ ಬಂದಿದ್ದು, ಹೊರಗೆ ನಿಂತು ಕುಟುಂಬಸ್ಥರ ಮೇಲೆ ಕೂಗಾಡಲು ಆರಂಭಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ಮನೆಗೆ ಬಂದು ಕುಳಿತು ಮಾತನಾಡುವಂತೆ ತಿಳಿಸಿದ್ದಾರೆ. ಆದರೂ ಕೇಳದ ಮಲಕಸಾಬ್ ಕೂಗಾಡುವುದನ್ನು ಮುಂದುವರೆಸಿದ್ದಾರೆ. ಇದರಿಂದ ಕೋಪಗೊಂಡ ಮಲಕಸಾಬ್ ಅವರು ಕೊಡಲಿ ತೆಗೆದುಕೊಂಡು ತಂದೆಯ ಕುತ್ತಿಗೆಗೆ ಹೊಡೆದಿದ್ದಾನೆ.

ಕೂಡಲೇ ಮಲಕಸಾಬ್ ಕೆಳಗೆ ಬಿದ್ದಿದ್ದು, ನೆರೆಮನೆಯವರು 108 ಆ್ಯಂಬುಲೆನ್ಸ್'ಕರೆ ಮಾಡಿ ನರಗುಂದ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್'ಗೆ ಕರೆದೊಯ್ಯುವಂತೆ ಸಲಹೆ ನೀಡಿದ್ದಾರೆ. ಕಿಮ್ಸ್'ಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಮಲಕಸಾಬ್ ಅವರು ಮೃತಪಟ್ಟಿದ್ದಾರೆ.

ಘಟನೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಲಕಸಾಬ್ ಅವರ ಪುತ್ರನನ್ನು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT