ಆನೆ ಕಾರ್ಯಪಡೆ 
ರಾಜ್ಯ

ರಾಜ್ಯದಲ್ಲಿ ಆನೆ ಕಾರ್ಯಪಡೆ ತಂಡಕ್ಕೆ ಮೂರು ತಿಂಗಳಿಂದ ಸಂಬಳ ನೀಡಿಲ್ಲ!

ರಾಜ್ಯದ ಘರ್ಷಣೆಯ ಪ್ರದೇಶಗಳಲ್ಲಿ ಆನೆಗಳ ಹಾವಳಿಯನ್ನು ತಡೆಯುವ ಸಲುವಾಗಿ ರಾಜ್ಯ ಸರ್ಕಾರವು ಪ್ರಾಥಮಿಕವಾಗಿ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆ(ಇಟಿಎಫ್) ಅನ್ನು ನವೆಂಬರ್ ತಿಂಗಳಲ್ಲಿ ರಚಿಸಿತು.

ಮಡಿಕೇರಿ: ರಾಜ್ಯದ ಘರ್ಷಣೆಯ ಪ್ರದೇಶಗಳಲ್ಲಿ ಆನೆಗಳ ಹಾವಳಿಯನ್ನು ತಡೆಯುವ ಸಲುವಾಗಿ ರಾಜ್ಯ ಸರ್ಕಾರವು ಪ್ರಾಥಮಿಕವಾಗಿ ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಮೈಸೂರು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆ(ಇಟಿಎಫ್) ಅನ್ನು ನವೆಂಬರ್ ತಿಂಗಳಲ್ಲಿ ರಚಿಸಿತು.

ಇಟಿಎಫ್ ತಂಡಗಳು ರಚನೆಯಾದಾಗಿನಿಂದಲೂ ಕಾರ್ಯನಿರ್ವಹಿಸುತ್ತಿವೆ. ಆದರೆ ಸುಮಾರು ಮೂರು ತಿಂಗಳಿನಿಂದ ಅಧಿಕಾರಿಗಳಿಗೆ ಸಂಬಳ ನೀಡಿಲ್ಲ. ಇನ್ನು ಒಂದು ತಿಂಗಳ ಹಿಂದೆಯೇ ಆನೆ-ಸಂಘರ್ಷದ ಜಿಲ್ಲೆಗಳಿಗೆ ಚಾಮರಾಜನಗರ ಜಿಲ್ಲೆ ಕೂಡ ಸೇರ್ಪಡೆಯಾಗಿದ್ದು, ಇಟಿಎಫ್ ತಂಡವನ್ನು ಸ್ಥಾಪಿಸಲಾಗಿದೆ.

ಇಟಿಎಫ್ ಅಡಿಯಲ್ಲಿ ಪ್ರತಿ ಜಿಲ್ಲೆಗೆ ಉಪ ಅರಣ್ಯಾಧಿಕಾರಿ, ರೇಂಜ್ ಫಾರೆಸ್ಟ್ ಆಫೀಸರ್, ನಾಲ್ಕು ಉಪ ವಲಯ ಅರಣ್ಯಾಧಿಕಾರಿಗಳು ಮತ್ತು ಎಂಟು ಅರಣ್ಯ ರಕ್ಷಕರನ್ನು ಶಾಶ್ವತ ಆಧಾರದ ಮೇಲೆ ನೇಮಿಸಲಾಗಿದೆ.

ಇಟಿಎಫ್‌ಗೆ 36 ಅರಣ್ಯ ವೀಕ್ಷಕರನ್ನು ಹೊರಗುತ್ತಿಗೆ ಸಿಬ್ಬಂದಿಯಾಗಿ ನೇಮಿಸಲಾಗಿದೆ. ಕೊಡಗಿನಲ್ಲಿ, ಇಟಿಎಫ್ ತಂಡವು ಪ್ರಾರಂಭದಿಂದಲೂ ಸಕ್ರಿಯವಾಗಿದೆ ಮತ್ತು ಇತ್ತೀಚೆಗೆ ಪೊನ್ನಂಪೇಟೆ ವ್ಯಾಪ್ತಿಯಲ್ಲಿ ಇಬ್ಬರು ಕಾರ್ಮಿಕರ ಜೀವವನ್ನು ಬಲಿತೆಗೆದುಕೊಂಡ ಸಂಘರ್ಷ ಹುಲಿಯನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ಆನೆ ಸಂಘರ್ಷದ ಪ್ರದೇಶಗಳಲ್ಲಿ ಬೆಂಬಲ ನೀಡುವುದರ ಜೊತೆಗೆ, ಕೊಡಗಿನ ತಂಡವು ಟಿ ನರಸೀಪುರದಲ್ಲಿ ಸಂಘರ್ಷ ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ಆದರೆ, ಕಳೆದ ವರ್ಷ ನವೆಂಬರ್ 30ರಿಂದ ಕೆಲಸಕ್ಕೆ ಹಾಜರಾಗಿದ್ದರೂ ಯಾವೊಬ್ಬ ಅಧಿಕಾರಿಗೂ ವೇತನ ಪಾವತಿಯಾಗಿಲ್ಲ. ಇಟಿಎಫ್‌ನ ಹೊರಗುತ್ತಿಗೆ ಸಿಬ್ಬಂದಿಗಳು ವೇತನ ಸ್ವೀಕರಿಸಿದ್ದರೆ, ಇಟಿಎಫ್‌ನ ಯಾವುದೇ ಅಧಿಕಾರಿಗಳಿಗೆ ಇನ್ನು ಸಿಕ್ಕಿಲ್ಲ.

"ನಮಗೆ ಹೆಚ್ಚುವರಿ ಭತ್ಯೆ ಮತ್ತು ಇತರ ಪ್ರಯೋಜನಗಳ ಭರವಸೆ ನೀಡಲಾಯಿತು. ಆದರೆ ಮೂಲ ವೇತನ ಸಿಕ್ಕಿಲ್ಲ. ಸುಮಾರು ಮೂರು ತಿಂಗಳ ಕಾಲ ಸಂಬಳ ಇಲ್ಲದೆ, ನಾವು EMI ಗಳು ಮತ್ತು ಸಾಲಗಳನ್ನು ಪಾವತಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಯೊಬ್ಬರು ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT