ರೋಹಿಣಿ ಸಿಂಧೂರಿ. 
ರಾಜ್ಯ

ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ

ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.

ಬೆಂಗಳೂರು: ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.

ವಿಧಾನಸೌಧಕ್ಕೆ ಇಂದು ಆಗಮಿಸಿದ ರೋಹಿಣಿ ಸಿಂಧೂರಿಯವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪ ಎಂಬಂತೆ ಜಗಳಕ್ಕಿಳಿದಿರುವುದು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.

ಇದರಂತೆ ಇಬ್ಬರೂ ಅಧಿಕಾರಿಗಳಿಗೆ ಮುಖ್ಯದರ್ಶಿಗಳು ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ಹಿನ್ನೆಲೆಯಲ್ಲಿ ಇಂದು ರೋಹಿಣಿ ಸಿಂಧೂರಿಯವರು ಇಂದು ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಅಧಿಕಾರಿಗಳ ವರ್ತನೆ ಬಹಳ ಬೇಸರ ತರಿಸಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಜನ ದೇವಮಾನವರು ಎಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲಾ ಅಧಿಕಾರಿಗಳಿಗೂ ಅಪಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ಪೊಲೀಸ್ ಮಾಹಾನಿರ್ದೇಶಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಲಾಗಿದೆ. ಕಾನೂನು ಚೌಕಟ್ಟಿನೊಳಗೆ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಈ ಹಿಂದೆ ಕೂಡ ಈ ಇಬ್ಬರಿಗೆ ನೋಟಿಸ್ ನೀಡಲಾಗಿತ್ತು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT