ಸಚಿವ ಎಂಟಿಬಿ ನಾಗರಾಜ್ ನೇತೃತ್ವದಲ್ಲಿನ ಸಭೆ 
ರಾಜ್ಯ

248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.8691 ಕೋಟಿ ಮೊತ್ತದ ಯೋಜನೆ- ಎಂಟಿಬಿ ನಾಗರಾಜ್

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ  ಸೂಚಿಸಿದರು.

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ  ಸೂಚಿಸಿದರು.

ವಿಕಾಸಸೌಧದಲ್ಲಿ ಇಂದು ಅಮೃತ್-2.0 ಯೋಜನೆಯ ಪ್ರಗತಿ ಪರಿಶೀಲಿಸಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಲಕ್ಷಕ್ಕಿಂತ ಕಡಿಮೆ ಜನಸಂಖ್ಯೆ ಇರುವ 287 ಸ್ಥಳೀಯ ಸಂಸ್ಥೆಗಳಿದ್ದು, ಅವುಗಳಲ್ಲಿ 248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ಅಮೃತ್-2.0 ಯೋಜನೆ ಅಡಿ ಕುಡಿಯುವ ನೀರು ಪೂರೈಸಲಾಗುವುದು ಎಂದು ತಿಳಿಸಿದರು.

 ಅಮೃತ್-2.0 ಯೋಜನೆ  9230 ಕೋಟಿ ರೂ.ಗಳದಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರ ರೂ. 4, 615 ಕೋಟಿ ರೂ.ನೆರವು ನೀಡಲಿದ್ದು,ರಾಜ್ಯ ಸರ್ಕಾರದ ಪಾಲು 3, 692 ಕೋಟಿ ರೂ.,ಉಳಿದ 927 ಕೋಟಿ ರೂ.ಗಳನ್ನು ಸ್ಥಳೀಯ ಸಂಸ್ಥೆಗಳು ಭರಿಸಬೇಕಾಗುತ್ತದೆ ಎಂದರು. 

ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್,ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್,ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಮೋಹನ್ ರಾಜ್ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್