ಅಪಘಾತದಲ್ಲಿ ಮೃತಪಟ್ಟವರು 
ರಾಜ್ಯ

ಮಂಡ್ಯ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರ ದುರ್ಮರಣ, ಮೂವರಿಗೆ ಗಂಭೀರ ಗಾಯ!

ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಡ್ಯ: ಬೀಗರ ಔತಣಕೂಟ ಮುಗಿಸಿ ಬೆಂಗಳೂರಿನಿಂದ ವಾಪಸಾಗುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಮದ್ದೂರು ತಾಲೂಕು ಗೆಜ್ಜಲಗೆರೆ ಬಳಿ ಇಂದು ಬೆಳಗ್ಗೆ ಮುಂದೆ ಹೋಗುತ್ತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ಅಪಘಾತ ಸಂಭವಿಸಿತ್ತು.

ಮೃತರನ್ನು 23 ವರ್ಷದ ಸದ್ದಾಂ ಷರೀಫ್ ಹಾಗೂ ಕಾರಿನ ಚಾಲಕ ಶಾಕಿಬ್ ಎಂದು ಗುರುತಿಸಲಾಗಿದೆ. ಮೃತ ಸದ್ದಾಂ ಷರೀಫ್ ಕುಟುಂಬದ 24 ನಸೀರಾ, 20 ವರ್ಷದ ನಿಖತ್ ಹಾಗೂ 26 ವರ್ಷದ ಝಹೀರ್ ಅಪಘಾತದಲ್ಲಿ ಗಾಯಗೊಂಡಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; ಎಲ್ಲರ ಮನಗೆದ್ದ US ಮ್ಯಾನೇಜರ್ ಪ್ರತಿಕ್ರಿಯೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT