ಜೆ.ಪಿ. ನಡ್ಡಾ 
ರಾಜ್ಯ

ಚಿಕ್ಕಮಗಳೂರು: ಎಲ್ಲಾ ಬಿಕ್ಕಟಿನ ಸಂದರ್ಭಗಳಲ್ಲಿ ಅಡಿಕೆ ಬೆಳೆಗಾರರ ರಕ್ಷಣೆ- ಜೆ.ಪಿ.ನಡ್ಡಾ

ಕೇಂದ್ರ ಸರ್ಕಾರ ಎಲ್ಲಾ ಬಿಕ್ಕಟ್ಟಿನಿಂದ ಅಡಿಕೆ ಬೆಳೆಗಾರರನ್ನು ರಕ್ಷಣೆ ಮಾಡಿರುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ಕೊಪ್ಪ: ಕೇಂದ್ರ ಸರ್ಕಾರ ಎಲ್ಲಾ ಬಿಕ್ಕಟ್ಟಿನಿಂದ ಅಡಿಕೆ ಬೆಳೆಗಾರರನ್ನು ರಕ್ಷಣೆ ಮಾಡಿರುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.

ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆದ ಅಡಿಕೆ ಬೆಳೆಗಾರರ  ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡುತ್ತಿದ್ದು, ಮೂರು ಬಾರಿ ಅಡಿಕೆ ಕನಿಷ್ಠ ಆಮದು ಬೆಲೆಯನ್ನು ಹೆಚ್ಚಿಸಲಾಗಿದೆ ಎಂದರು. 

ಅಸ್ಥಿರಗೊಳಿಸುವ ಬೆಲೆಗಳು ಮತ್ತು ಕಳಪೆ ಗುಣಮಟ್ಟದ ಉತ್ಪನ್ನ ದೇಶೀಯ ಮಾರುಕಟ್ಟೆಗೆ ಪ್ರವೇಶಿಸುವುದನ್ನು ತಡೆಯಲು ನಾವು ಪ್ರಯತ್ನಿಸಿದ್ದೇವೆ. ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗದಿರಲಿ ಎಂದು  ಸರ್ಕಾರ ಪ್ರತಿ ನಿತ್ಯ ಪರಿಗಣಿಸಿದ್ದು, ಎಲ್ಲಾ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಅವರ ರಕ್ಷಣೆಗೆ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

ಡಬಲ್ ಎಂಜಿನ್ ಸರ್ಕಾರ ರೈತರು, ಮಹಿಳೆಯರು, ಬಡವರು, ದಲಿತರು, ಯುವಕರು ಸೇರಿದಂತೆ ಸಮಾಜದ ಎಲ್ಲ ವರ್ಗದವರನ್ನು ಸಬಲೀಕರಣಗೊಳಿಸಲು ಪ್ರಯತ್ನಿಸುತ್ತಿದೆ. ಗ್ರಾಮೀಣ ಮತ್ತು ನಗರ ಪ್ರದೇಶದ ಸಬಲೀಕರಣದತ್ತ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಜೆಪಿ ನಡ್ಡಾ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!