ಶಿವಮೊಗ್ಗ ವಿಮಾನ ನಿಲ್ದಾಣ 
ರಾಜ್ಯ

ಕುವೆಂಪು ನಾಡಿನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯ, ಎಲ್ಲಾ ಹಿಂದಿಮಯ!

ಕನ್ನಡಿಗರ ಹೆಗ್ಗುರುತು ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ, ಇನ್ನೂ ಉದ್ಘಾಟನೆಗೊಳ್ಳದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯವಾಗಿದ್ದು, ಎಲ್ಲಾ ಫಲಕಗಳು ಹಿಂದಿ ಹಾಗೂ ಇಂಗ್ಲಿಷ್ ಮಯವಾಗಿವೆ.

ಶಿವಮೊಗ್ಗ: ಕನ್ನಡಿಗರ ಹೆಗ್ಗುರುತು ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ, ಇನ್ನೂ ಉದ್ಘಾಟನೆಗೊಳ್ಳದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯವಾಗಿದ್ದು, ಎಲ್ಲಾ ಫಲಕಗಳು ಹಿಂದಿ ಹಾಗೂ ಇಂಗ್ಲಿಷ್ ಮಯವಾಗಿವೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ವಿಮಾನ ನಿಲ್ದಾಣವನ್ನು ರಾಜ್ಯ ಸರ್ಕಾರ ನಿರ್ವಿುಸುತ್ತಿದ್ದು, ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಲಾಗುತ್ತಿದ್ದರೂ ಅಧಿಕಾರಿಗಳು ಕನ್ನಡದಲ್ಲಿ ಫಲಕಗಳನ್ನು ಹಾಕಿಲ್ಲ.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ಉದ್ಘಾಟಿಸಲಿದ್ದಾರೆ. ಉದ್ಘಾಟನೆಗೆ ಸಿದ್ಧಗೊಂಡಿರುವ ವಿಮಾನ ನಿಲ್ದಾಣದ ಆವರಣದಲ್ಲಿರುವ ಫಲಕಗಳು ಕನ್ನಡದಲ್ಲಿ ಇಲ್ಲದಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರದರ್ಶನ ಫಲಕಗಳನ್ನು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಹಾಕಲಾಗಿದೆ. ಸರ್ಕಾರದ  ಹಿಂದಿ ಹೇರಿಕೆಯನ್ನು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು ಖಂಡಿಸಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಎಲ್ಲೆಲ್ಲೂ ಹಿಂದಿಯೇ. ಶುದ್ಧ ಕನ್ನಡಿಗರು ನೆಲೆಸಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬೋರ್ಡ್‌ಗಳು ಮಾತ್ರ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿವೆ. ಕನ್ನಡಿಗರ ಮೇಲೆ ಹಿಂದಿ ಹೇರುವುದನ್ನು ನಿಲ್ಲಿಸಿ ಎಂದು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

‘ಸರ್ಕಾರ ಹಿಂದಿ ಹೇರಿಕೆಯನ್ನು ನಿಲ್ಲಿಸಬೇಕು’. ವಿಮಾನ ನಿಲ್ದಾಣಕ್ಕೆ ಕುವೆಂಪು ಅವರ ಹೆಸರಿಡುವಾಗ ಕನ್ನಡದಲ್ಲಿ ಫಲಕಗಳು ಏಕೆ ಇಲ್ಲ ಎಂದು ಮತ್ತೊಬ್ಬ ಕನ್ನಡಪರ ಹೋರಾಟಗಾರರು ಪ್ರಶ್ನಿಸಿದ್ದಾರೆ.

ಸಂಸದ ಬಿ ವೈ ರಾಘವೇಂದ್ರ ಅವರು ಪೋಸ್ಟ್ ಮಾಡಿದ ವಿಮಾನ ನಿಲ್ದಾಣದ ವೀಡಿಯೋದಲ್ಲಿ ಕನ್ನಡ ಪ್ರದರ್ಶನ ಫಲಕಗಳು ಇಲ್ಲದಿರುವುದನ್ನು ಗಮನಿಸಿದ ಹಲವು ಟ್ವೀಟ್ ಬಳಕೆದಾರರು, ಕನ್ನಡದಲ್ಲಿಯೇ ಫಲಕಗಳನ್ನು ಹಾಕುವಂತೆ ಸಂಸದರನ್ನು ಒತ್ತಾಯಿಸಿದ್ದಾರೆ.

ಈ ಸಮಸ್ಯೆ ತಮ್ಮ ಗಮನಕ್ಕೆ ಬಂದಿದ್ದು, ಶೀಘ್ರದಲ್ಲಿ ಪರಿಹರಿಸುವುದಾಗಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಭರವಸೆ ನೀಡಿದ್ದಾರೆ. ಅಲ್ಲದೆ ಡಿಸ್‌ಪ್ಲೇ ಬೋರ್ಡ್‌ಗಳು ಕನ್ನಡದಲ್ಲಿ ಇರುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಡಿಸಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT