ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಬಸ್​ ನಿಲ್ದಾಣದಲ್ಲಿ‌ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ಸನ್ನೇ ಕದ್ದ ಖತರ್ನಾಕ್ ಗಳು!

ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್​ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ.

ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್​ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ.

ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎನ್ ಈಕೆಆರ್ ಟಿಸಿ ಬಸ್ ಒಂದನ್ನು ಕಳ್ಳರು ನಸುಕಿನ ಜಾವ 3-30ರ ಸುಮಾರಿಗೆ ಕಳ್ಳತನ ಮಾಡಿರುವ ಘಟನೆ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ನಂಬರ್ 2 ಡಿಪೋಗೆ ಸೇರಿದ ಬಸ್ ಇದಾಗಿದೆ.

KA 38 F 971 ನಂಬರ್ ನ ಬಸ್ ಕಳ್ಳತನ ಮಾಡಿದ ಕಳ್ಳರು, ಮಿರಿಯಾಣ ಮಾರ್ಗವಾಗಿ ತಾಂಡೂರ ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇದರಿಂದಾಗಿ ಬಸ್ಸು ಹುಡುಕಾಟಕ್ಕೆ ಪೊಲೀಸರ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಈಗಾಗಲೇ ಎರಡು ಪೊಲೀಸ್ ತಂಡಗಳು ತೆಲಂಗಾಣದ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದೆ. ಸ್ಥಳಕ್ಕೆ ಚಿಂಚೋಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT