ಸಿಎಂ ಬೊಮ್ಮಾಯಿ 
ರಾಜ್ಯ

ಪಿಯುಸಿ ಕಾಲೇಜುಗಳೇ ಇಲ್ಲದ ಊರುಗಳಿಗೂ ಪದವಿ ಕಾಲೇಜು ಮಂಜೂರು ಮಾಡಿದ್ದರು, ಅದನ್ನು ಸರಿಪಡಿಸುತ್ತಿದ್ದೇವೆ: ಸಿಎಂ ಬೊಮ್ಮಾಯಿ

ಯಾರದ್ದೋ ಒತ್ತಡಕ್ಕೆ ಮಣಿದು ಪದವಿ ಪೂರ್ವ(ಪಿಯು) ಕಾಲೇಜುಗಳೇ ಇಲ್ಲದ ಊರುಗಳಿಗೂ ಪದವಿ ಕಾಲೇಜು ಮಂಜೂರು ಮಾಡಿದ್ದರು. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

ಬೆಂಗಳೂರು: ಯಾರದ್ದೋ ಒತ್ತಡಕ್ಕೆ ಮಣಿದು ಪದವಿ ಪೂರ್ವ(ಪಿಯು) ಕಾಲೇಜುಗಳೇ ಇಲ್ಲದ ಊರುಗಳಿಗೂ ಪದವಿ ಕಾಲೇಜು ಮಂಜೂರು ಮಾಡಿದ್ದರು. ಅದನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದರು.

ವಿಧಾನಸಭೆಯಲ್ಲಿ ಕಾಲೇಜು ಮತ್ತು ಶಾಲೆಗಳಲ್ಲಿನ ಮೂಲಭೂತ ಸೌಕರ್ಯಗಳ ಕುರಿತು ಚರ್ಚೆಯಲ್ಲಿ ಮುಖ್ಯಮಂತ್ರಿಗಳು ಈ ವಿಚಾರವನ್ನು ತಿಳಿಸಿದರು.

ಚರ್ಚೆ ವೇಳೆ ಕಾಂಗ್ರೆಸ್‌ನ ಅಫಜಲಪುರ ಶಾಸಕ ಎಂ.ವೈ.ಪಾಟೀಲ್ ತಮ್ಮ ಕ್ಷೇತ್ರದಲ್ಲಿ ಪಿಯು ಕಾಲೇಜು ಇಲ್ಲ, ಆದರೆ ಪದವಿ ಕಾಲೇಜು ಇದೆ ಎಂದು ಹೇಳಿದರು.

ಕೋಟ್ಯಂತರ ರೂಪಾಯಿ ವೆಚ್ಚದ ಪದವಿ ಕಾಲೇಜಿಗೆ ಬೃಹತ್ ಕಟ್ಟಡವಿದೆ. ಆದರೆ, ಕ್ಷೇತ್ರದಲ್ಲಿ ಪಿಯುಸಿ ಕಾಲೇಜು ಇಲ್ಲ. ಪರಿಸ್ಥಿತಿ ಹೀಗಿರುವಾಗ ಉನ್ನತ ಶಿಕ್ಷಣಕ್ಕೆ ವಿದ್ಯಾರ್ಥಿಗಳನ್ನು ಹೇಗೆ ಸೇರ್ಪಡೆಗೊಳಿಸುವುದು ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ರಾಜಕೀಯ ಒತ್ತಡಕ್ಕೆ ಮಣಿದು ಪಿಯು ಕಾಲೇಜುಗಳಿಲ್ಲದೇ ಊರುಗಳಿಗೆ ಪದವಿ ಕಾಲೇಜು ಮಂಜೂರು ಮಾಡಿದ್ದರು. ನನ್ನ ಕ್ಷೇತ್ರದಲ್ಲೂ ಪಿಯು ಕಾಲೇಜು ಇರಲಿಲ್ಲ, ಡಿಗ್ರಿ ಕಾಲೇಜ್ ಇತ್ತು, ಈಗ ಪಿಯು ಕಾಲೇಜು ಆರಂಭಿಸಿದ್ದೇನೆ, ಹಲವೆಡೆ ಹೊಂದಾಣಿಕೆ ಇಲ್ಲದ ಕಾರಣ ಸೂಕ್ತ ಚಿಂತನೆ ನಡೆಸಿಲಾಗಿಲ್ಲ ಎಂದರು.

ಚರ್ಚೆ ವೇಳೆ ಹಲವು ಶಾಸಕರು ಪಕ್ಷಾತೀತವಾಗಿ ಕಾಲೇಜುಗಳಲ್ಲಿ ಮೂಲಸೌಕರ್ಯಗಳ ಕೊರತೆಯ ಬಗ್ಗೆ ದೂರಿದರು.

ಇದು ವಿದ್ಯಾರ್ಥಿಗಳ ದಾಖಲಾತಿ ಅನುಪಾತದಲ್ಲಿ ಕುಸಿತಕ್ಕೆ ಕಾರಣವಾಗುತ್ತದೆ. ಕರ್ನಾಟಕದಲ್ಲಿ ಎಸ್‌ಎಸ್‌ಎಲ್‌ಸಿ ನಂತರ ಪಿಯು ಕಾಲೇಜುಗಳಿಗೆ ದಾಖಲಾತಿ ಪ್ರಮಾಣ ಶೇ.25ರಷ್ಟಿದ್ದರೆ, ಪದವಿ ಕಾಲೇಜುಗಳಲ್ಲಿ ಶೇ.16ಕ್ಕೆ ಮತ್ತು ಸ್ನಾತಕೋತ್ತರ ಪದವಿಯಲ್ಲಿ ಶೇ.6ಕ್ಕೆ ಇಳಿಕೆಯಾಗಿದೆ ಎಂದು ಬೊಮ್ಮಾಯಿ ಹೇಳಿದರು.

ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣ ಹೆಚ್ಚಿಸಲು ಪದವಿ ಕಾಲೇಜಿನವರೆಗೆ ಉಚಿತ ಶಿಕ್ಷಣ ನೀಡುವುದಾಗಿ ಘೋಷಣೆ ಮಾಡಿದ್ದೇನೆ, ಹಳೆಯ ಶಿಥಿಲಗೊಂಡಿರುವ ತರಗತಿ ಕೊಠಡಿಗಳ ದುರಸ್ತಿಗೆ ತಮ್ಮ ಸರ್ಕಾರ ಹೊಸ ತರಗತಿ ಕೊಠಡಿಗಳಿಗೆ ಹಣ ಮಂಜೂರು ಮಾಡಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT