ಕಾಂಗ್ರೆಸ್ ನಾಯಕರ ಪ್ರತಿಭಟನೆ 
ರಾಜ್ಯ

ಸ್ಯಾಂಕಿ ರಸ್ತೆಯಲ್ಲಿ ಮೇಲ್ಸೇತುವೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ, ಹಲವರ ಬಂಧನ

ಬಾಷ್ಯಂ ಸರ್ಕಲ್‌ನಲ್ಲಿ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಬಾಷ್ಯಂ ಸರ್ಕಲ್‌ನಲ್ಲಿ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಸೋಮವಾರ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಷ್ಯಂ ಸರ್ಕಲ್‌ನಲ್ಲಿ ಸ್ಯಾಂಕಿ ಮೇಲ್ಸೇತುವೆ ನಿರ್ಮಾಣ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಗೂ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳೊಂದಿಗೆ ಸೋಮವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಮುಖಂಡರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಳ್ಳಲಾಗಿತ್ತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದ ಮುಖಂಡರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ಯಾಂಕಿ ರಸ್ತೆ ವಿಸ್ತರಣೆ ಮತ್ತು 60 ಕೋಟಿ ರೂಪಾಯಿ ವೆಚ್ಚದ ಮೇಲ್ಸೇತುವೆ ಕಾಮಗಾರಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ತೆರಳುವಂತೆ ಎಚ್ಚರಿಸಿದರು, ಆದರೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಕೆಲವು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡರು.

ಈ ವೇಳೆ ಮಾತನಾಡಿದ ಕಾಂಗ್ರೆಸ್ ನಾಯಕ ರಾಮಲಿಂಗಾ ರೆಡ್ಡಿ, 'ಮೇಲ್ಸೇತುವೆ ಅವೈಜ್ಞಾನಿಕವಾಗಿದೆ, ಇದು ಗುತ್ತಿಗೆದಾರರ ಆಧಾರಿತ ಕಾಮಗಾರಿಯಾಗಿದೆ ಮತ್ತು ಸರ್ಕಾರವು ಮಲ್ಲೇಶ್ವರಂ, ವೈಯಾಲಿಕಾವಲ್ ಮತ್ತು ಅದರ ಸುತ್ತಮುತ್ತಲಿನ ನಿವಾಸಿಗಳ ಮಾತನ್ನು ಕೇಳದೆ ಯೋಜನೆ ಕೈಗೆತ್ತಿಕೊಂಡಿದೆ. ನಾವು ನಿವಾಸಿಗಳು ಮತ್ತು ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಲು ಮತ್ತು ಅವರಿಗೆ ತೋರಿಸಲು ನಾವು ಪ್ರತಿಭಟನೆಯನ್ನು ಪ್ರಾರಂಭಿಸಿದ್ದೇವೆ. ಬಿಬಿಎಂಪಿ ಮತ್ತು ಸರ್ಕಾರದ ವಿರುದ್ಧದ ಹೋರಾಟದಲ್ಲಿ ಅವರೊಂದಿಗೆ ಇದ್ದೇವೆ ಎಂದು ಹೇಳಿದರು.

ಫೆ.3ರಂದು ಇಲ್ಲಿನ ನಿವಾಸಿಗಳು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಇತರ ಪಕ್ಷದ ಮುಖಂಡರಿಗೆ ವಿಧಾನಸಭೆಯಲ್ಲಿ ವಿಷಯ ಪ್ರಸ್ತಾಪಿಸುವಂತೆ ಒಕ್ಕಲಿಗರು ಮನವಿ ಮಾಡಿಕೊಂಡಿದ್ದು, ವಿರೋಧ ಪಕ್ಷವು ಸ್ಯಾಂಕಿ ರಸ್ತೆಯಲ್ಲಿ ಪ್ರತಿಭಟನೆ ಆರಂಭಿಸಿತು.

‘ಕಾಂಗ್ರೆಸ್‌ ಬಂದು ಒಗ್ಗಟ್ಟು ಪ್ರದರ್ಶಿಸಿದ್ದು, ವಿಧಾನಸಭೆಯಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿರುವುದು ನಮಗೆ ಸಂತಸ ತಂದಿದೆ. ಸ್ಯಾಂಕಿ ರಸ್ತೆ ವಿಸ್ತರಣೆ ಹಾಗೂ ಮೇಲ್ಸೇತುವೆ ಕುರಿತು ನಮ್ಮ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿದರು’ ಎಂದು ಸಿಟಿಜನ್ ಫಾರ್ ಸ್ಯಾಂಕಿ ಸಂಘಟನೆಯ ಪ್ರೀತಿ ಸುಂದರರಾಜನ್ ಹೇಳಿದರು.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel