ಬ್ಯೋನ್ ಬೋರ್ಗ್ 
ರಾಜ್ಯ

ಕಾರ್ಯಕ್ರಮಕ್ಕೆ ತಡವಾಗಿ ಬಂದ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್‌; ಸಿಎಂ ಗೆ ಮುಖಭಂಗ

ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಟೆನಿಸ್ ದಿಗ್ಗಜ ಬ್ಯೋನ್ ಬೋರ್ಗ್ ಅವರು ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ ಯಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ.

ಬೆಂಗಳೂರು: ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಟೆನಿಸ್ ದಿಗ್ಗಜ ಬ್ಯೋನ್ ಬೋರ್ಗ್ ಅವರು ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ ಯಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ.

ಹನ್ನೊಂದು ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಗಳ ವಿಜೇತ, ಸ್ವೀಡನ್‌ ದೇಶದ ಬೋರ್ಗ್‌ ಅವರ ಪುತ್ರ ಲಿಯೊ ಬೋರ್ಗ್‌, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಅವರು ಬೆಂಗಳೂರಿಗೆ ಬಂದಿದ್ದಾರೆ.

ಭಾರತದ ಮಾಜಿ ಆಟಗಾರ ವಿಜಯ್‌ ಅಮೃತ್‌ರಾಜ್‌ ಮತ್ತು ಬೋರ್ಗ್‌ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಕೆಎಸ್‌ಎಲ್‌ಟಿಎನಲ್ಲಿ ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ 11 ಗಂಟೆಯಾದರೂ ಆರಂಭವಾಗಲಿಲ್ಲ.

ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್‌ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲವು ನಿಮಿಷಗಳಾದ ಬಳಿಕ ಬೊಮ್ಮಾಯಿ ಅವರು ಬಂದರು.

ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು. ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಬೋರ್ಗ್‌ ಹೇಳಿದ್ದಾರೆ. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಬೇಕಾಯಿತು. ‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT