ಡಿ ರೂಪಾ 
ರಾಜ್ಯ

ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ, ಕುಟುಂಬ ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ: ಫೇಸ್ ಬುಕ್ ನಲ್ಲಿ ಮತ್ತೊಂದು ಪೋಸ್ಟ್ ಹಾಕಿದ ಡಿ ರೂಪಾ

ತಾವು ಆರ್ ಟಿಐ ಕಾರ್ಯಕರ್ತ ಗಂಗರಾಜು ಜೊತೆಗೆ ಫೋನ್ ನಲ್ಲಿ ನಡೆಸಿದ್ದ ಸಂಭಾಷಣೆ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿ ಪ್ರಸಾರವಾಗುತ್ತಿದ್ದಂತೆ ಐಪಿಎಸ್ ಅಧಿಕಾರಿ ಡಿ ರೂಪಾ ಇಂದು ಫೇಸ್ ಬುಕ್ ಪೋಸ್ಟನ್ನು ಹಾಕಿದ್ದಾರೆ.

ಬೆಂಗಳೂರು: ತಾವು ಆರ್ ಟಿಐ ಕಾರ್ಯಕರ್ತ ಗಂಗರಾಜು ಜೊತೆಗೆ ಫೋನ್ ನಲ್ಲಿ ನಡೆಸಿದ್ದ ಸಂಭಾಷಣೆ ಆಡಿಯೊ ಮಾಧ್ಯಮಗಳಿಗೆ ಸಿಕ್ಕಿ ಪ್ರಸಾರವಾಗುತ್ತಿದ್ದಂತೆ ಐಪಿಎಸ್ ಅಧಿಕಾರಿ ಡಿ ರೂಪಾ ಇಂದು ಫೇಸ್ ಬುಕ್ ಪೋಸ್ಟನ್ನು ಹಾಕಿದ್ದಾರೆ. ಅದರಲ್ಲಿ ತಾವು ಹೋರಾಡುತ್ತಿರುವ ಉದ್ದೇಶವೊಂದು, ಮಾಧ್ಯಮಗಳಲ್ಲಿ ಆ ವಿಷಯ ಬಿಟ್ಟು ಬೇರೆ ವಿಷಯದ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಹೇಳಿರುವ ರೂಪಾ ಭಾರತದಲ್ಲಿ ಕುಟುಂಬ ಸಂಸ್ಕೃತಿ, ಮಹಿಳೆಗಿರುವ ಸವಾಲುಗಳನ್ನು ಸೂಕ್ಷ್ಮವಾಗಿ ಬರೆದಿದ್ದಾರೆ.

ಅವರು ಇಂದು ಪೋಸ್ಟ್ ಮಾಡಿರುವ ಬರಹದ ಸಾರಾಂಶ ಹೀಗಿದೆ: ಆತ್ಮೀಯ ಮಾಧ್ಯಮ ಮಿತ್ರರೇ, ನಾನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎತ್ತಿರುವ ಭ್ರಷ್ಟಾಚಾರದ ವಿಷಯದ ಬಗ್ಗೆ ಗಮನಹರಿಸಿ. ಜನಸಾಮಾನ್ಯರ ಮೇಲೆ ಹೆಚ್ಚು ಪರಿಣಾಮ ಬೀರುವ ಭ್ರಷ್ಟಾಚಾರದ ವಿರುದ್ಧ ಹೋರಾಡುವುದಕ್ಕೆ ನಾನು ಯಾರನ್ನೂ ತಡೆದಿಲ್ಲ. ಅದೇ ಸಮಯದಲ್ಲಿ, ಮಾದರಿ(PATTERN) ಎಂಬ ಇಂಗ್ಲಿಷ್ ಪದಕ್ಕೆ ಒತ್ತು ನೀಡಿ ಅಧಿಕಾರಿಗಳ ನಡುವಿನ ಸಂಬಂಧದಿಂದ ಸಂಸಾರಕ್ಕೆ ಕುತ್ತು ಬರುವ ವಿಚಾರವನ್ನು ಕೂಡ ರೂಪಾ ಇಲ್ಲಿ ಪ್ರಸ್ತಾಪಿಸಿದ್ದಾರೆ. 

ರಾಜ್ಯದ ಓರ್ವ ಐಎಎಸ್ ಅಧಿಕಾರಿಯ ಸಾವು, ತಮಿಳುನಾಡಿನಲ್ಲಿ ಓರ್ವ ಐಪಿಎಸ್ ಅಧಿಕಾರಿಯ ನಿಗೂಢ ಸಾವು ಮತ್ತು ಐಎಎಸ್ ದಂಪತಿಯ ವಿಚ್ಚೇದನದ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನು ಮತ್ತು ನನ್ನ ಪತಿ ಇನ್ನೂ ಒಟ್ಟಿಗೆ ಇದ್ದೇವೆ. ನಾವು ಇನ್ನೂ ಕುಟುಂಬ ಜೀವನ ಉಳಿಸಿಕೊಳ್ಳಲು ಹೋರಾಡುತ್ತಿದ್ದೇವೆ. ಕುಟುಂಬಕ್ಕೆ ಅಡ್ಡಿಯಾಗುತ್ತಿರುವ ಮಾದರಿಯನ್ನು ಪ್ರದರ್ಶಿಸುವ ಅಪರಾಧಿಯನ್ನು ದಯವಿಟ್ಟು ಪ್ರಶ್ನಿಸಿ. ಇಲ್ಲದಿದ್ದರೆ ಇನ್ನೂ ಹಲವು ಕುಟುಂಬಗಳು ನಾಶವಾಗುತ್ತವೆ. ನಾನು ಮಾನಸಿಕವಾಗಿ ಶಕ್ತಿಯುತ ಮಹಿಳೆಯಿದ್ದೇನೆ.ಹೋರಾಟ ನಡೆಸುವ ಶಕ್ತಿ ನನಗಿದೆ. ಎಲ್ಲಾ ಮಹಿಳೆಯರಿಗೆ ಹೋರಾಡಲು ಒಂದೇ ರೀತಿಯ ಶಕ್ತಿ ಇರುವುದಿಲ್ಲವಲ್ಲ. ದಯವಿಟ್ಟು ಅಂತಹ ಮಹಿಳೆಯರಿಗೆ ಧ್ವನಿಯಾಗಿರಿ. ಭಾರತವು ಕೌಟುಂಬಿಕ ಮೌಲ್ಯಗಳಿಗೆ ಹೆಸರುವಾಸಿಯಾಗಿದೆ. ಅದನ್ನು ಮುಂದುವರಿಸೋಣ. ಧನ್ಯವಾದಗಳು ಎಂದು ಬರೆದು ಮುಗಿಸಿದ್ದಾರೆ ಐಪಿಎಸ್ ಅಧಿಕಾರಿ ರೂಪ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT