ಸಿಎಂ ಬೊಮ್ಮಾಯಿ 
ರಾಜ್ಯ

ಸಿಎಂ, ಸಚಿವರ ಹೆಲಿಕಾಫ್ಟರ್ ಬಾಡಿಗೆಗೆ 30 ಕೋಟಿ ರೂ.: 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳ ಮಂಡನೆ

ರಾಜ್ಯ ಸರಕಾರ 2022-23ನೆ ಸಾಲಿಗೆ ಮೂರನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೆಎಸ್ಸಾರ್ಟಿಸಿ ಸಹಿತ ಸಾರಿಗೆ ನಿಗಮಗಳಿಗೆ 1 ಸಾವಿರ ಕೋಟಿ ರೂ., ಮಠಗಳಿಗೆ 32 ಕೋಟಿ ರೂಪಾಯಿ ಸೇರಿದಂತೆ ಒಟ್ಟು 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ಮಂಡನೆ ಮಾಡಿದೆ.

ಬೆಂಗಳೂರು: ರಾಜ್ಯ ಸರಕಾರ 2022-23ನೆ ಸಾಲಿಗೆ ಮೂರನೇ ಮತ್ತು ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ವಿಧಾನಸಭೆಯಲ್ಲಿ ಮಂಡಿಸಿದ್ದು, ಕೆಎಸ್ಸಾರ್ಟಿಸಿ ಸಹಿತ ಸಾರಿಗೆ ನಿಗಮಗಳಿಗೆ 1 ಸಾವಿರ ಕೋಟಿ ರೂ., ಮಠಗಳಿಗೆ 32 ಕೋಟಿ ರೂಪಾಯಿ ಸೇರಿದಂತೆ ಒಟ್ಟು 11,267 ಕೋಟಿ ರೂ. ಮೊತ್ತದ ಪೂರಕ ಅಂದಾಜುಗಳನ್ನು ಮಂಡನೆ ಮಾಡಿದೆ.

ಮಂಗಳವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪರವಾಗಿ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಪೂರಕ ಅಂದಾಜುಗಳನ್ನು ಮಂಡಿಸಿದರು.

ರಾಜ್ಯಪಾಲರು, ಮುಖ್ಯಮಂತ್ರಿ, ಸಚಿವರು ಹಾಗೂ ಇತರೆ ಗಣ್ಯ ವ್ಯಕ್ತಿಗಳ ಅಧಿಕೃತ ಪ್ರವಾಸಕ್ಕೆ ಬಾಡಿಗೆ ಆಧಾರದ ಮೇಲೆ ಹೆಲಿಕಾಪ್ಟರ್ ಬಿಲ್ ಪಾವತಿಸಲು 15 ಕೋಟಿ ರೂ.ಬಿಡುಗಡೆ ಮಾಡಿದ್ದು, 15 ಕೋಟಿ ರೂ. ಹೆಚ್ಚುವರಿ ಸಹಿತ ಒಟ್ಟು 30ಕೋಟಿ ರೂ.ಗಳನ್ನು ಪೂರಕ ಅಂದಾಜಿನಲ್ಲಿ ಒದಗಿಸಲಾಗಿದೆ.

ಸಾರಿಗೆ, ವಸತಿ, ಜವಳಿ ಸಚಿವರು, ಬಾಗಲಕೋಟೆ ಹಾಗೂ ಕೋಲಾರ ಸಂಸದರ ಉಪಯೋಗಕ್ಕಾಗಿ 5 ಹೊಸ ಕಾರುಗಳ ಖರೀದಿಗೆ ಒಟ್ಟು 1.39 ಕೋಟಿ ರೂ.ಗಳನ್ನು ಪಾವತಿಸಲು ಪೂರಕ ಅಂದಾಜುಗಳಲ್ಲಿ ಹಣ ನೀಡಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ಕೃಷಿ ಉತ್ಪನ್ನಗಳ ಖರೀದಿಗೆ ಆವರ್ತ ನಿಧಿಗೆ 1 ಸಾವಿರ ಕೋಟಿ ರೂ., ಸಿಎಂ ವಿವೇಚನಾ ನಿಧಿಯಡಿ ಮಠ ಹಾಗೂ ದೇವಾಲಯಗಳಿಗೆ 32 ಕೋಟಿ ರೂ.ಗಳನ್ನು ಒದಗಿಸಲಾಗಿದೆ.

ಇಂಧನ ಇಲಾಖೆ ವ್ಯಾಪ್ತಿಯಲ್ಲಿ 2022ರ ಅಕ್ಟೋಬರ್ ನಿಂದ 2023ರ ಮಾರ್ಚ್ ವರೆಗೆ ಇಂಧನ ಹೊಂದಾಣಿಕೆ ವೆಚ್ಚ ಪಾವತಿಗೆ 300 ಕೋಟಿ ರೂ. ಹೆಚ್ಚುವರಿ ಮೊತ್ತ, ಸಬ್ಸಿಡಿ ಬಾಕಿ ಮೊತ್ತ ಪಾವತಿಸಲು 1,600 ಕೋಟಿ ರೂ. ಸಹಿತ ಇಂಧನ ಇಲಾಖೆಗೆ 1,900 ಕೋಟಿ ರೂ. ಪೂರಕ ಅಂದಾಜುಗಳಲ್ಲಿ ಮೀಸಲಿಡಲಾಗಿದೆ.

ಜಲ ಸಂಪನ್ಮೂಲ-2,550 ಕೋಟಿ ರೂ., ಇಂಧನ-1,900 ಕೋಟಿ ರೂ., ಲೋಕೋಪಯೋಗಿ-1,503 ಕೋಟಿ ರೂ., ನಗರಾಭಿವೃದ್ಧಿ-1,355 ಕೋಟಿ ರೂ., ಒಳಾಡಳಿತ ಮತ್ತು ಸಾರಿಗೆ-1050 ಕೋಟಿ ರೂ., ಸಹಕಾರ-1,061 ಕೋಟಿ ರೂ. ಹಾಗೂ ಸಮಾಜ ಕಲ್ಯಾಣ ಇಲಾಖೆ-513 ಕೋಟಿ ರೂ.ಗಳನ್ನು ಪೂರಕ ಅಂದಾಜುಗಳಲ್ಲಿ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT