ನಟ ಡಾಲಿ ಧನಂಜಯ್ ಚಾಲನೆ 
ರಾಜ್ಯ

'ಮದುವೆಯಾಗಲು ಹುಡುಗಿ ಕರುಣಿಸಪ್ಪಾ' ಎಂದು ಮಾದಪ್ಪನ ಬೆಟ್ಟಕ್ಕೆ ಪಾದಯಾತ್ರೆ ಹೊರಟ ಯುವಕರು: ನಟ ಡಾಲಿ ಧನಂಜಯ್ ಚಾಲನೆ

ಇತ್ತೀಚೆಗೆ ಹಳ್ಳಿ ಹುಡುಗರಿಗೆ, ಕೃಷಿಕರಿಗೆ ಮದುವೆಯಾಗಲು ಹುಡುಗಿ ಸಿಗುವುದಿಲ್ಲ ಎಂಬುದು ಎಲ್ಲಾ ಕಡೆ ಬಹಳ ದೊಡ್ಡ ಸಮಸ್ಯೆಯಾಗಿದೆ. ಹುಡುಗಿ ಸಿಗದೆ ವರ್ಷ 35-40 ಆದರೂ ಮದುವೆಯಾಗದೆ ಉಳಿದಿರುವ ಪುರುಷರು ಅನೇಕ ಮಂದಿ ಇದ್ದಾರೆ. 

ಮಂಡ್ಯ: ಇತ್ತೀಚೆಗೆ ಹಳ್ಳಿ ಹುಡುಗರಿಗೆ, ಕೃಷಿಕರಿಗೆ ಮದುವೆಯಾಗಲು ಹುಡುಗಿ ಸಿಗುವುದಿಲ್ಲ ಎಂಬುದು ಎಲ್ಲಾ ಕಡೆ ಬಹಳ ದೊಡ್ಡ ಸಮಸ್ಯೆಯಾಗಿದೆ. ಹುಡುಗಿ ಸಿಗದೆ ವರ್ಷ 35-40 ಆದರೂ ಮದುವೆಯಾಗದೆ ಉಳಿದಿರುವ ಪುರುಷರು ಅನೇಕ ಮಂದಿ ಇದ್ದಾರೆ. 

ಯಾರಿಗೇಳೋಣ ನಮ್ಮ ಪ್ಲಾಬ್ಲಂ, ದೇವರ ಮುಂದೆಯೇ ಮಂಡಿಯೂರಿ ಪ್ರಾರ್ಥಿಸೋಣ ಎಂದು ಮದುವೆ ವಯಸ್ಸಿಗೆ ಬಂದಿರೋ ಯುವಕರು ದೇವರ ನಾಮ ಸ್ಮರಣೆ ಮಾಡಿಕೊಂಡು ಮಲೈ ಮಹದೇಶ್ವರ ಬೆಟ್ಟದ ಕಡೆ ಪಾದಯಾತ್ರೆ ಹೊರಟಿದ್ದಾರೆ. ತಮ್ಮ ಸಮಸ್ಯೆ ಬಗ್ಗೆ ಗಮನ ಸೆಳೆಯಲು ಮಂಡ್ಯ ಜಿಲ್ಲೆಯ ಯುವಕರ ಗುಂಪು ಮಲೈ ಮಹದೇಶ್ವರನ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದೆ. 

ಮಂಡ್ಯದಿಂದ ಚಾಮರಾಜನಗರದ ಮಲೈ ಮಹದೇಶ್ವರ ಬೆಟ್ಟಕ್ಕೆ 3 ದಿನಗಳ ಪಾದಯಾತ್ರೆ ಕೈಗೊಂಡಿದ್ದು, ಹಲವು ಬ್ರಹ್ಮಚಾರಿಗಳು ಭಾಗಿಯಾಗಿದ್ದಾರೆ. ಪಾದಯಾತ್ರೆಯಲ್ಲಿ ಪಾಲ್ಗೊಂಡವರು ಕೃಷಿ, ವ್ಯಾಪಾರದಂತಹ ಕೆಲಸಗಳಲ್ಲಿ ತೊಡಗಿಸಿಕೊಂಡವರಾಗಿದ್ದಾರೆ.

ಈ ವಿನೂತನ ಕಾರ್ಯಕ್ರಮವನ್ನು ಮಂಡ್ಯದ ಕೆ.ಎಂ.ದೊಡ್ಡಿ ಗ್ರಾಮದ ವೆಂಕಟೇಶ್ವರ ದೇವಸ್ಥಾನದಿಂದ ʼʼಬ್ರಹ್ಮಚಾರಿಗಳ ನಡೆ ಮಾದಪ್ಪನ ಬೆಟ್ಟದ ಕಡೆʼʼ ಎಂಬ ಘೋಷ ವಾಕ್ಯದೊಂದಿಗೆ ಯುವಕರು ಕಾಲ್ನಡಿಗೆ ಶುರು ಮಾಡಿದ್ದಾರೆ. ಅವಿವಾಹಿತ ಯುವಕರಿಂದ ಉತ್ತಮ ಸ್ಪಂದನೆಯೂ ವ್ಯಕ್ತವಾಗಿದೆ.

ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಈ ಷರತ್ತುಗಳು: ಸದ್ಯ ಈ ಪಾದಯಾತ್ರೆಯಲ್ಲಿ ಅವಿವಾಹಿತ ಯುವಕರು ಮಾತ್ರ ಪಾಲ್ಗೊಂಡಿದ್ದಾರೆ. ವಿವಾಹಿತರು, ನಿಶ್ಚಿತಾರ್ಥ ಆದವರು, 30 ವರ್ಷ ಆಗದೇ ಇರೋರಿಗೆ ಈ ಪಾದಯಾತ್ರೆ ನಿರ್ಬಂಧಿಸಲಾಗಿದೆ. ಅದರ ಹೊರತಾಗಿಯೂ ನೂರಾರು ಯುವಕರು ಮೂರು ದಿನಗಳ ಪಾದಯಾತ್ರೆ ಮಾಡಿ ಕೆಎಂ ದೊಡ್ಡಿ, ಮಳವಳ್ಳಿ, ಕೊಳ್ಳೆಗಾಲ, ಹನೂರು ಮಾರ್ಗವಾಗಿ ಮಹದೇಶ್ವರ ಬೆಟ್ಟ ತಲುಪಲಿದ್ಧಾರೆ. ದಾರಿ ಮಧ್ಯೆ ಈ ಅವಿವಾಹಿತ ಭಕ್ತರಿಗೆ ಊಟ, ವಸತಿ, ಪಾನೀಯದ ವ್ಯವಸ್ಥೆಯೂ ಮಾಡಲಾಗಿದೆ.

ನಟ ಡಾಲಿ ಧನಂಜಯ್ ಚಾಲನೆ: ಅವಿವಾಹಿತರ ಈ ಯಾತ್ರೆಗೆ ಕನ್ನಡದ ನಟ ಡಾಲಿ ಧನಂಜಯ್ ಚಾಲನೆ ನೀಡಿ ಯುವಕರ ಉದ್ದೇಶಕ್ಕೆ ಪ್ರೋತ್ಸಾಹ ನೀಡಿ ಹುರಿದುಂಬಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT