ಡಿ.ಕೆ ಶಿವಕುಮಾರ್ 
ರಾಜ್ಯ

ಹೆಚ್ಚಿನ ಸಂಖ್ಯೆಯ ಮನೆಗಳಿಗೆ ಜಾಸ್ತಿ ಗ್ಯಾರಂಟಿ ಕಾರ್ಡ್‌ ತಲುಪಿಸುವ ಕಾರ್ಯಕರ್ತರಿಗೆ ಟಿವಿ ಗಿಫ್ಟ್‌: ಡಿಕೆ ಶಿವಕುಮಾರ್‌

ನಾವು ಘೋಷಿಸಿರುವ ಯೋಜನೆಗಳ ವಿವರಗಳನ್ನು ಹೊಂದಿರುವ ಕಾರ್ಡ್‌ ಅನ್ನು ಪ್ರತಿ ಮನೆ ಮನೆಗೂ ನೀಡಬೇಕು. ಮನೆಯವರಿಂದ ಸಹಿ ಹಾಕಿಸಬೇಕು. ಹೆಚ್ಚು ಮಂದಿಯನ್ನು ನೋಂದಣಿ ಮಾಡಿದ 10 ಕಾರ್ಯಕರ್ತರ ಮನೆಗೆ ಟಿವಿ ಉಡುಗೊರೆ ಕೊಡುತ್ತೇವೆ.

ಚಾಮರಾಜನಗರ: ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಜ್ಯದ ಪ್ರತಿ ಮನೆಗೆ 200 ಯೂನಿಟ್‌ ಉಚಿತ ವಿದ್ಯುತ್‌, ಮಹಿಳಾ ಯಜಮಾನಿಗೆ ತಿಂಗಳಿಗೆ 2 ಸಾವಿರ ನೀಡುವ ಗ್ಯಾರೆಂಟಿ ಕಾರ್ಡ್‌ ಅನ್ನು ಹೆಚ್ಚು ಮನೆಗಳಿಗೆ ತಲುಪಿಸುವ ರಾಜ್ಯದ ಪ್ರತಿ ಹಳ್ಳಿಯ 10 ಕಾರ್ಯಕರ್ತರಿಗೆ ಟಿವಿಯನ್ನು ಉಡುಗೊರೆಯಾಗಿ ಕೊಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಮಂಗಳವಾರ  ನಡೆದ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ನಾವು ಘೋಷಿಸಿರುವ ಯೋಜನೆಗಳ ವಿವರಗಳನ್ನು ಹೊಂದಿರುವ ಕಾರ್ಡ್‌ ಅನ್ನು ಪ್ರತಿ ಮನೆ ಮನೆಗೂ ನೀಡಬೇಕು. ಮನೆಯವರಿಂದ ಸಹಿ ಹಾಕಿಸಬೇಕು. ಹೆಚ್ಚು ಮಂದಿಯನ್ನು ನೋಂದಣಿ ಮಾಡಿದ 10 ಕಾರ್ಯಕರ್ತರ ಮನೆಗೆ ಟಿವಿ ಉಡುಗೊರೆ ಕೊಡುತ್ತೇವೆ. ಬ್ಲಾಕ್‌ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಇದನ್ನು ಗಮನಿಸಬೇಕು’ ಎಂದಿದ್ದಾರೆ.

ನೀವಿಬ್ಬರೂ ಸೇರಿ ಒಂದು ಚೆಕ್‌ಗೆ ಸಹಿ ಹಾಕಬೇಕು ಎಂದು ಪ್ರಿಯಾಂಕಾ ಗಾಂಧಿ ಅವರು ನನ್ನ ಮತ್ತು ಸಿದ್ದರಾಮಯ್ಯ ಅವರ ಸಹಿಯನ್ನು ಚೆಕ್‌ಗೆ ಹಾಕಿಸಿದರು. ಇದು ಗ್ಯಾರಂಟಿ ಕಾರ್ಡ್‌, 200 ಯೂನಿಟ್‌ ವಿದ್ಯುತ್‌ ಉಚಿತ, 2000 ರೂ. ಖಚಿತ. ಇದನ್ನು ಯಾರೂ ಹೆಚ್ಚು ಜನರಿಗೆ ತಲುಪಿಸುತ್ತಾರೋ ಅವರಿಗೆ ಟಿವಿಯನ್ನು ಬಹುಮಾನವಾಗಿ ಕೊಡಿ ಎಂದರು. ನೀವು ಭೇಟಿ ನೀಡಿರುವ ಮನೆಯವರು ಯಾವುದೇ ಪಕ್ಷದ ಬೆಂಗಲಿಗರಾಗಿರಲಿ, ಕಾಂಗ್ರೆಸ್‌ ಪ್ರಣಾಳಿಕೆಯನ್ನು ಅವರಿಗೆ ತಿಳಿಸಬೇಕು’ ಎಂದಿದ್ದಾರೆ.

ಹೊರಗಿಂದ ಬಂದ ಕೆಲವರು ಕ್ಷೇತ್ರದ ಜನರಿಗೆ ಹಣ ಮತ್ತಿತರ ಆಮಿಷ ತೋರಿಸುತ್ತಿದ್ದಾರೆ ಎಂದು ಶಾಸಕ ನರೇಂದ್ರ ಹೇಳಿದ್ದಾರೆ. ನಾನು ಮತ​ದಾ​ರ​ರಿಗೆ ಹೇಳುವುದಿಷ್ಟೆ. ಬಿಜೆಪಿ ಅವರಾಗಲಿ, ಜೆಡಿಎಸ್‌ನವರಾಗಲಿ, ಮತ್ತೊಬ್ಬರಾಗಲಿ ದುಡ್ಡು ಕೊಟ್ಟರೆ ಸ್ವೀಕ​ರಿಸಿ, ಓಟ್‌ ಮಾತ್ರ ಕಾಂಗ್ರೆಸ್‌ಗೆ ಹಾಕಿ ಎಂದು ಸಲಹೆ ನೀಡಿ​ದ​ರು. ಈಗಾಗಲೇ 200 ಯೂನಿಟ್‌ ಉಚಿತ ವಿದ್ಯುತ್‌, ಮನೆ ಯಜಮಾನಿಗೆ .2000, 10 ಕೆ.ಜಿ. ಉಚಿತ ಅಕ್ಕಿಯನ್ನು ಅಧಿಕೃತವಾಗಿ ಘೋಷಿಸಿದ್ದೇ​ವೆ. ನಾವೇನಾ​ದರೂ ಈ ಭರವಸೆ ಈಡೇರಿಸದಿದ್ದರೆ ಇನ್ನು ಮುಂದೆ ಮತ ಕೇಳಲು ನಿಮ್ಮ ಮುಂದೆ ಬರಲ್ಲ ಎಂದು ಘೋಷಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT