ಸಾಂದರ್ಭಿಕ ಚಿತ್ರ 
ರಾಜ್ಯ

ಹಾವೇರಿ: ಮದುವೆಗೆ ಮಾಡಿದ್ದ ಸಾಲ ತೀರಿಸಲಾಗದೆ ತಂದೆ-ತಾಯಿ ಆತ್ಮಹತ್ಯೆ; ಮನನೊಂದು ವಿವಾಹಿತ ಮಗಳು ನೇಣಿಗೆ ಶರಣು

ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ‌ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ.

ಹಾವೇರಿ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ‌ಜಿಲ್ಲೆಯ ಸವಣೂರು ತಾಲ್ಲೂಕಿನ ತೊಂಡೂರು ಗ್ರಾಮದಲ್ಲಿ ನಡೆದಿದೆ

ಹನುಮಂತಗೌಡ ಪಾಟೀಲ (54), ಅವರ ಪತ್ನಿ ಲಲಿತಾ ಪಾಟೀಲ(50) ಮತ್ತು ಮಗಳು ನೇತ್ರಾ ಪಾಟೀಲ(22) ಆತ್ಮಹತ್ಯೆಗೆ ಶರಣಾದ ದುರ್ದೈವಿಗಳು.

ಹನುಮಂತ ಗೌಡ ಪಾಟೀಲ ಅವರದ್ದು ಮಧ್ಯಮ ವರ್ಗದ ಕುಟುಂಬ. ಅವರು ಸಾಲ ಮಾಡಿ ಮಗಳು ನೇತ್ರಾಳ ಮದುವೆ ಮಾಡಿದ್ದರು. ಆದರೆ ಮಗಳ ಮದುವೆಗೆ ಮಾಡಿದ ಸಾಲವನ್ನು ತೀರಿಸಲಾಗದೆ ಭಾರಿ ಕಷ್ಟಪಡುತ್ತಿದ್ದರು.

ಹನುಮಂತಗೌಡ ಪಾಟೀಲ ದಂಪತಿ ಸುಮಾರು 25 ಲಕ್ಷ ರುಪಾಯಿ ಸಾಲ ಮಾಡಿ ಮಗಳ ಮದುವೆಯನ್ನು ಮಾಡಿದ್ದರು. ಈ ಸಾಲಬಾಧೆಯನ್ನು ತಾಳಲಾರದೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಕಾರಣಕ್ಕೆ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದನ್ನು ತಿಳಿದು ನೊಂದ ಮಗಳು ತಾನೂ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾಳೆ.

ಮಗಳು ಮನೆಗೆ ಬಂದ ವೇಳೆಯೇ ಅವರು ಆಕೆಗೆ ಗೊತ್ತಿಲ್ಲದಂತೆ ನೇಣು ಬಿಗಿದುಕೊಂಡಿದ್ದರು. ಮಗಳ ಜತೆ ಸಾಲ ಮತ್ತಿತರ ವಿಚಾರಗಳ ಬಗ್ಗೆ ಮೊದಲು ಚರ್ಚೆ ನಡೆಸಿರುವ ಸಾಧ್ಯತೆಗಳಿವೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಸವಣೂರು ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಆಂಧ್ರ ಪ್ರದೇಶ: ONGC ತೈಲ ಬಾವಿಯಲ್ಲಿ ಅನಿಲ ಸೋರಿಕೆ; ಮುಗಿಲೆತ್ತರಕ್ಕೆ ಚಿಮ್ಮಿದ ಬೆಂಕಿ, ಗ್ರಾಮಸ್ಥರ ಸ್ಥಳಾಂತರ!

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ; ಈ ಬಗ್ಗೆ ಸ್ವತಃ ಸಿಎಂ ಹೇಳಿದ್ದೇನು?

Video: ಚಿತ್ರಮಂದಿರದ ಮಹಿಳಾ ಟಾಯ್ಲೆಟ್ ನಲ್ಲಿ ಸೀಕ್ರೆಟ್ ಕ್ಯಾಮೆರಾ, ವಿಡಿಯೋ ಚಿತ್ರೀಕರಿಸುತ್ತಿದ್ದ ಕಿರಾತಕನಿಗೆ ಬಿತ್ತು ಗೂಸಾ! FIR ದಾಖಲು

'ನನ್ ಗಾಡಿ ನಂಗ್ ಬೇಕು.. ಕೊಡ್ತೀರೋ ಇಲ್ವೋ..': ಹಾವು ತೋರಿಸಿ ಟ್ರಾಫಿಕ್ ಪೊಲೀಸರಿಗೆ ಆಟೋ ಚಾಲಕ ಬೆದರಿಕೆ, Video Viral

ಬೀದರ್: ಅರಣ್ಯ ಭೂಮಿ ಒತ್ತುವರಿ ಆರೋಪಿಸಿದ್ದಕ್ಕೆ KDP ಸಭೆಯಲ್ಲೇ BJP ಶಾಸಕನ ಕಡೆ ನುಗ್ಗಿದ Congress MLC, Video Viral!

SCROLL FOR NEXT