ತಪಾಸಣೆ ನಡೆಸುತ್ತಿರುವ ಅಧಿಕಾರಿಗಳು. 
ರಾಜ್ಯ

ವೈಟ್‌ಫೀಲ್ಡ್ ಮೆಟ್ರೊ: ಅಧಿಕಾರಿಗಳಿಂದ ಸುರಕ್ಷತೆ ಪರಿಶೀಲನೆ ಕಾರ್ಯ ಆರಂಭ

ವೈಟ್‌ಫೀಲ್ಡ್‌ನಿಂದ ಕೆಆರ್‌ ಪುರಂವರೆಗಿನ 13.71 ಕಿ.ಮೀ ಉದ್ದದ ವಿಸ್ತೃತ ಪರ್ಪಲ್‌ ಲೈನ್‌ನಲ್ಲಿ ಮೆಟ್ರೋ ಕಾರ್ಯಾಚರಣೆ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು 3 ದಿನಗಳ ಪರಿಶೀಲನೆ ಕಾರ್ಯವನ್ನು ಬುಧವಾರ ಆರಂಭಿಸಿದ್ದಾರೆ.

ಬೆಂಗಳೂರು: ವೈಟ್‌ಫೀಲ್ಡ್‌ನಿಂದ ಕೆಆರ್‌ ಪುರಂವರೆಗಿನ 13.71 ಕಿ.ಮೀ ಉದ್ದದ ವಿಸ್ತೃತ ಪರ್ಪಲ್‌ ಲೈನ್‌ನಲ್ಲಿ ಮೆಟ್ರೋ ಕಾರ್ಯಾಚರಣೆ ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ರೈಲ್ವೆ ಸುರಕ್ಷತಾ ಆಯುಕ್ತರು 3 ದಿನಗಳ ಪರಿಶೀಲನೆ ಕಾರ್ಯವನ್ನು ಬುಧವಾರ ಆರಂಭಿಸಿದ್ದಾರೆ.

ವೈಟ್‌ಫೀಲ್ಡ್‌ನಿಂದ ಕೆ.ಆರ್‌.ಪುರ ನಡುವೆ ಅಕ್ಟೋಬರ್‌ನಲ್ಲೇ ಪರೀಕ್ಷಾರ್ಥ ಸಂಚಾರ ಆರಂಭಿಸಲಾಗಿತ್ತು. ಅದು ಯಶಸ್ವಿಯಾದ ಬಳಿಕ ಪರಿಶೀಲನೆ ನಡೆಸಲು ರೈಲ್ವೆ ಸುರಕ್ಷತಾ ಆಯುಕ್ತರಿಗೆ ಬಿಎಂಆರ್‌ಸಿಎಲ್ ಆಹ್ವಾನ ನೀಡಿತ್ತು.

ಬುಧವಾರ ಆರಂಭವಾಗಿರುವ ಸಿಆರ್‌ಎಸ್‌ ತಪಾಸಣೆ ಯಶಸ್ವಿಯಾಗಿದ್ದು, ‌ಇನ್ನೂ ಎರಡು ದಿನ ಪರಿಶೀಲನೆ ನಡೆಯಲಿದೆ. ಯಾವುದೇ ಅಡೆ–ತಡೆ ಎದುರಾಗದಿದ್ದರೆ ಮಾರ್ಚ್ ಎರಡು ಅಥವಾ ಮೂರನೇ ವಾರದಲ್ಲಿ ಮೆಟ್ರೊ ರೈಲು ವಾಣಿಜ್ಯ ಸಂಚಾರ ಆರಂಭವಾಗಲಿದೆ ಎನ್ನಲಾಗಿದೆ.

ಬೆಳಿಗ್ಗೆ 10 ಗಂಟೆಗೆ ಸುರಕ್ಷತಾ ಪರಿಶೀಲನೆ ಕಾರ್ಯ ಆರಂಭವಾಯಿತು. ವೈಟ್‌ಫೀಲ್ಡ್, ಚನ್ನಸಂದ್ರ, ಕಾಡುಗೋಡಿ, ಪಟ್ಟಂದೂರು ಅಗ್ರಹಾರ (ಐಟಿಪಿಎಲ್), ಸದರಮಂಗಲ ಮತ್ತು ನಲ್ಲೂರಹಳ್ಳಿ (ವೈದೇಹಿ ಆಸ್ಪತ್ರೆ ಹಿಂದೆ) ನಿಲ್ದಾಣಗಳನ್ನು ಪರಿಶೀಲನೆ ನಡೆಸಲಾಯಿತು.

ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಮೆಟ್ರೋ ಅಧಿಕಾರಿಯೊಬ್ಬರು, ಹಳಿ ವ್ಯವಸ್ಥೆ, ಲಿಫ್ಟ್‌ನ ಕಾರ್ಯನಿರ್ವಹಣೆ, ಎಸ್ಕಲೇಟರ್‌ಗಳು ಮತ್ತು ಅಗ್ನಿಶಾಮಕ ವ್ಯವಸ್ಥೆಗಳ ವಿವಿಧ ನಿಯತಾಂಕಗಳನ್ನು ದಿನವಿಡೀ ಪರಿಶೀಲಿಸಲಾಯಿತು. ನಿಲ್ದಾಣದಲ್ಲಿ ಲಭ್ಯವಿರುವ ಪ್ರಯಾಣಿಕರ ಸೌಕರ್ಯಗಳು ಮತ್ತು ಸೌಲಭ್ಯಗಳನ್ನು ಕೂಡ ಪರಿಶೀಲಿಸಲಾಯಿತು ಎದು ಹೇಳಿದ್ದಾರೆ.

ಹಳಿಗಳ ಉದ್ದಕ್ಕೂ ಇರುವ ಬೇರಿಂಗ್‌ಗಳನ್ನು ತಂಡವು ಇಂದು ರಾತ್ರಿ ಅಥವಾ ಗುರುವಾರ ರಾತ್ರಿ ಪರಿಶೀಲನೆ ನಡೆಸಲಾಗುತ್ತದೆ ಎಂದು ಬಿಎಂಆರ್'ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್ ಅವರು ತಿಳಿಸಿದ್ದಾರೆ.

ಸಿಎಂಆರ್‌ಎಸ್ ಅನುಮತಿ ದೊರೆತಿದ್ದೇ ಆದರೆ, ವೈಟ್‌ಫೀಲ್ಡ್‌ನಿಂದ ಕೆಆರ್ ಪುರಂವರೆಗಿನ ಮಾರ್ಗವು ಮಾರ್ಚ್ 15ರ ನಂತರ ಕಾರ್ಯಾಚರಣೆ ಆರಂಭಿಸಲಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT