ಒಕ್ಕಣ್ಣಿನ ನಾಗರಹಾವು 
ರಾಜ್ಯ

ಕಾರವಾರ ಬಳಿ ಅಪರೂಪದ 'ಒಕ್ಕಣ್ಣಿನ ನಾಗರಹಾವು' ಪತ್ತೆ

ಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ಕಾರವಾರ: ಕಾರವಾರ ಸಮೀಪದ ಕದ್ರಾದಲ್ಲಿ ಅಪರೂಪದ ಒಕ್ಕಣ್ಣಿನ ನಾಗರಹಾವು ಪತ್ತೆಯಾಗಿದ್ದು, ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ.

ರವಾರ ತಾಲೂಕಿನ ಮಲ್ಲಾಪುರದ ಲಕ್ಷ್ಮೀನಗರದ ಆಕಾಶ ಎನ್.ಚೌಗ್ಲೆ ಎನ್ನುವವರ ಮನೆಯ ಬಳಿ ಈ ಅಪರೂಪದ ಹಾವು ಕಾಣಿಸಿಕೊಂಡಿದೆ. ಕೂಡಲೇ ಚೌಗ್ಲೆ ಅವರು ಕದ್ರಾ ಅರಣ್ಯ ವಿಭಾಗದ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ತಕ್ಷಣ ಸ್ಥಳಕ್ಕೆ ತೆರಳಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

ಈ ರೀತಿ ಒಕ್ಕಣ್ಣಿನ ನಾಗರ ಕಾಣ ಸಿಗುವುದು ತೀರಾ ವಿರಳ. ಈ ನಾಗರ ಹಾವಿಗೆ ಕಣ್ಣಿನ ಗುಳಿ ಮಾತ್ರವಿದ್ದು, ಕಣ್ಣುಗುಡ್ಡೆ ಇರುವುದಿಲ್ಲ ಬಿಲಾಲ್ ಶೇಖ್ ಅವರು ಮಾಹಿತಿ ನೀಡಿದ್ದಾರೆ.

ಹಾವು ಆನುವಂಶಿಕ ವಿಕಲತೆಯಿಂದ ಹುಟ್ಟಿರಬಹುದು ಅಥವಾ ಮುಂಗುಸಿಯೊಂದಿಗಿನ ಕಾದಾಟದಲ್ಲಿ ಕಣ್ಣು ಕಳೆದುಕೊಂಡಿರಬಹುದು. ಒಂದು ಕಣ್ಣಿನ ನಾಗರಹಾವು ಬಹಳ ಅಪರೂಪವಾಗಿ ಕಂಡುಬರುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT