ಸಾಂದರ್ಭಿಕ ಚಿತ್ರ 
ರಾಜ್ಯ

ದಕ್ಷಿಣ ಕನ್ನಡ: ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ನಡೆಸಿದ 7 ಮಂದಿಯ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರನ್ನು ಕೊಂದಿದ್ದ ಕಾಡಾನೆಯನ್ನು ಸೆರೆಹಿಡಿದ ನಂತರ ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ ನಡೆದ ಘಟನೆಯಲ್ಲಿ ಸ್ಥಳೀಯರು ಅಧಿಕೃತ ವಾಹನಗಳಿಗೂ ಹಾನಿ ಉಂಟು ಮಾಡಿದ್ದು, ಆ ಪ್ರದೇಶದಲ್ಲಿನ ಎಲ್ಲ ಕಾಡಾನೆಗಳನ್ನು ಹಿಡಿಯಲು ಕಾರ್ಯಾಚರಣೆ ಮುಂದುವರಿಸುವಂತೆ ಒತ್ತಾಯಿಸಿದ್ದಾರೆ.

ಮೂರು ದಿನಗಳ ಕಾರ್ಯಾಚರಣೆ ಬಳಿಕ ಮುಜೂರು ಮೀಸಲು ಅರಣ್ಯದ ಬಳಿ ಅರಣ್ಯಾಧಿಕಾರಿಗಳು ಕಾಡಾನೆಯನ್ನು ಸೆರೆಹಿಡಿದಿದ್ದರು. ಅಧಿಕಾರಿಗಳು ಕಾಡಾನೆಯನ್ನು ಸೆರೆಹಿಡಿದ ಸಂಭ್ರಮದಲ್ಲಿರುವಾಗ, ಗ್ರಾಮಸ್ಥರು ದೂರ ಉಳಿಯಲು ಮತ್ತು ಪ್ರದೇಶದಲ್ಲಿ ತೊಂದರೆ ಉಂಟುಮಾಡುತ್ತಿರುವ ಇತರ ಆನೆಗಳನ್ನು ಸಹ ಹಿಡಿಯುವಂತೆ ಒತ್ತಾಯಿಸಿದರು.

ಈ ವೇಳೆ ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ ನಡೆದು, ಗ್ರಾಮಸ್ಥರು ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಎರಡು ಪೊಲೀಸ್ ವಾಹನಗಳು, ಅರಣ್ಯ ಇಲಾಖೆಗೆ ಸೇರಿದ ಒಂದು ಜೀಪ್ ಮತ್ತು ಅರಣ್ಯ ಅಧಿಕಾರಿ ವಾಹನಕ್ಕೆ ಹಾನಿಯಾಗಿದೆ.

ಇದೇ ವೇಳೆ ಬಂಧಿತ ಏಳು ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಅಧಿಕಾರಿಗಳು ಆನೆಗಳನ್ನು ಹಿಡಿಯುವ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದಾರೆ ಮತ್ತು ಮೇಲಧಿಕಾರಿಗಳ ನಿರ್ದೇಶನದ ನಂತರವೇ ಅದು ಪುನರಾರಂಭವಾಗುತ್ತದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT