ಮೆಟ್ರೋ ಅಪಘಾತ 
ರಾಜ್ಯ

ಬೆಂಗಳೂರಿನಲ್ಲಿ ಮತ್ತೊಂದು ಮೆಟ್ರೋ ಅಪಘಾತ: ಕಬ್ಬಿಣದ ತುಂಡು ಬಿದ್ದು ಕಾರು ಜಖಂ

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಅಪಘಾತಗಳ ಸರಣಿ ಮುಂದುವರೆದಿದ್ದು, ಮೆಟ್ರೋ ನಿಲ್ದಾಣದ ಮೇಲಿಂದ ಕಬ್ಬಿಣದ ಸರಳು ಬಿದ್ದು ಕಾರು ಜಖಂಗೊಂಡಿರುವ ಘಟನೆ ವರದಿಯಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ರೈಲು ಅಪಘಾತಗಳ ಸರಣಿ ಮುಂದುವರೆದಿದ್ದು, ಮೆಟ್ರೋ ನಿಲ್ದಾಣದ ಮೇಲಿಂದ ಕಬ್ಬಿಣದ ಸರಳು ಬಿದ್ದು ಕಾರು ಜಖಂಗೊಂಡಿರುವ ಘಟನೆ ವರದಿಯಾಗಿದೆ.

ಸ್ಯಾಂಡಲ್ ಸೋಪ್ ಪ್ಯಾಕ್ಟರಿ ಬಳಿಯ ಮೇಟ್ರೋ ನಿಲ್ದಾಣದ ಕೆಳ ಭಾಗದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮೆಟ್ರೋದ ಕಬ್ಬಿಣದ ತುಂಡು ಬಿದ್ದಿದೆ. ಪರಿಣಾಮ ಕಾರಿನ ಬಾನೆಟ್ ಹಾಗೂ ಗಾಜು ಜಖಂ ಆಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಮೆಟ್ರೋದ ಕಬ್ಬಿಣದ ರಾಡ್ ಕಾರಿನ ಮೇಲೆ ಬಿದ್ದಿದ್ದರಿಂದ ಮಾಲೀಕ ರಿತೇಶ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಮಗೆ ಆದ ನಷ್ಟವನ್ನು ತುಂಬಿಕೊಟ್ಟು, ಮೇಟ್ರೋ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿದ್ದಾರೆ. 

ಕಳೆದ ತಿಂಗಳವಷ್ಟೇ ನಾಗವಾರ ಸಮೀಪ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ನಿರ್ಮಿಸಲಾಗಿದ್ದ ಕಬ್ಬಿಣದ ಚೌಕಟ್ಟು ಕುಸಿದು ತಾಯಿ-ಮಗು ಸಾವನ್ನಪ್ಪಿದ್ದರು. ಇದರ ಬೆನ್ನಲ್ಲೇ ಈ ಘಟನೆ ಸಂಭವಿಸಿದ್ದು ದೊಡ್ಡ ಅನಾಹುತವೇ ತಪ್ಪಿದೆ ಎಂದು ಹೇಳಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರದೇಶ: ಚಿತ್ರಕೂಟದಲ್ಲಿ 2 ದಶಕಗಳಲ್ಲೇ ಅತ್ಯಂತ ಭೀಕರ ಪ್ರವಾಹ, ಉಕ್ಕಿ ಹರಿದ ಮಂದಾಕಿನಿ ನದಿ; 1,000 ಜನರ ರಕ್ಷಣೆ

ಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮಥುರಾದಲ್ಲಿ ಬಿಗಿ ಭದ್ರತೆ

ಉದ್ಯಾನವನದ 5% ಭೂಮಿ ಪರಭಾರೆಗೆ ವಿರೋಧ; ಲಾಲ್‌ಬಾಗ್ ನಲ್ಲಿ ಜನಾಂದೋಲನ; ಉದ್ಯಾನ ರಕ್ಷಣೆ ಅಪರಾಧವಾದರೆ ಪ್ರತಿದಿನ ಅಪರಾಧ ಮಾಡ್ತೇನೆ- ತೇಜಸ್ವಿ ಸೂರ್ಯ

ಚಿಕ್ಕಬಳ್ಳಾಪುರ: ಮೃತ ಯುವಕನ ಹೊಟ್ಟೆಯಲ್ಲಿ ಬ್ಯಾಟರಿ, ಲೈಟರ್, ಕಬ್ಬಿಣದ ಚೂರು ಕಂಡು ವೈದ್ಯರು ದಂಗು!

ನೇಪಾಳ ಪ್ರವಾಹ: ಸಾವಿನ ಸಂಖ್ಯೆ 768ಕ್ಕೆ ಏರಿಕೆ; 2,500ಕ್ಕೂ ಹೆಚ್ಚು ಮಂದಿ ನಾಪತ್ತೆ; ಸುರಂಗದೊಳಗೆ 100ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ!