ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ 
ರಾಜ್ಯ

ಬಹು ನಿರೀಕ್ಷಿತ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಮಾರ್ಚ್ 11ರಂದು ಉದ್ಘಾಟನೆ: ಪ್ರಧಾನಿ ನರೇಂದ್ರ ಮೋದಿಯಿಂದ ಲೋಕಾರ್ಪಣೆ

ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್‌ 11ರಂದು ಲೋಕಾರ್ಪಣೆಯಾಗಲಿದೆ.

ಬೆಂಗಳೂರು: ಬೆಂಗಳೂರು ಹಾಗೂ ಮೈಸೂರು ನಗರಗಳ ಜನತೆ ಕಾತರದಿಂದ ಕಾಯುತ್ತಿದ್ದ, ಉಭಯ ನಗರಗಳ ನಡುವಿನ ದಶಪಥ ರಾಷ್ಟ್ರೀಯ ಹೆದ್ದಾರಿ ಮಾರ್ಚ್‌ 11ರಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಮಂಡ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಧೃಡಪಡಿಸಿದ್ದಾರೆ.

ಇದರ ಜೊತೆಗೆ ಪ್ರಧಾನಿ ಮೋದಿ ಮೈಸೂರಿನಿಂದ ಕುಶಾಲನಗರದವರೆಗಿನ ಉದ್ದೇಶಿತ ಚತುಷ್ಪಥ ಎಕ್ಸ್‌ಪ್ರೆಸ್ ರಸ್ತೆಯ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಶುಕ್ರವಾರ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಈ ಯೋಜನೆ ಪೂರ್ಣಗೊಂಡಿರುವುದರಿಂದ, ಅವರೇ ಇದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವುದು ಸೂಕ್ತ" ಎಂದು ಸಿಂಹ ಹೇಳಿದರು. ನೀವು ರಾಜ್ಯ ರಾಜಕೀಯಕ್ಕೆ ಪ್ರವೇಶಿಸುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಾಪ್ ಸಿಂಹ,  2029 ರವರೆಗೆ ಮೋದಿ ನಾಯಕತ್ವದಲ್ಲಿ ಸಂಸದರಾಗಿ ಮುಂದುವರಿಯಲು ಬಯಸುತ್ತೇನೆ ಎಂದು ಹೇಳಿದರು.

ನಾನು ಇಲ್ಲಿಗೆ ಬಂದಿರುವುದು ದೀರ್ಘಾವಧಿಯ ರಾಜಕೀಯ ಮಾಡಲು ಅಲ್ಲ ಆದರೆ ನನ್ನ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮತ್ತು 15 ವರ್ಷಗಳ ಅವಧಿಯಲ್ಲಿ ಇತರ ಕ್ಷೇತ್ರಗಳಿಗೆ ಮಾದರಿಯಾಗಲು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT