ಸಾಂದರ್ಭಿಕ ಚಿತ್ರ 
ರಾಜ್ಯ

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಸಾವು; ಆತ ಉಪವಾಸ ಸತ್ಯಾಗ್ರಹದಲ್ಲಿ ಭಾಗಿಯಾಗಿರಲಿಲ್ಲ!

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ (ಎಪಿಯು) 26 ವರ್ಷದ ವಿದ್ಯಾರ್ಥಿ ಶುಕ್ರವಾರ ಕಾಲೇಜು ಉತ್ಸವದ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದು, ಈಗ ನಡೆಯುತ್ತಿರುವ ಪ್ರತಿಭಟನೆಯಿಂದಲೇ ಈ ಘಟನೆ ಸಂಭವಿಸಿರಬಹುದು ಎಂಬ ಆರೋಪಕ್ಕೆ ಕಾರಣವಾಗಿದೆ.

ಬೆಂಗಳೂರು: ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ (ಎಪಿಯು) 26 ವರ್ಷದ ವಿದ್ಯಾರ್ಥಿ ಶುಕ್ರವಾರ ಕಾಲೇಜು ಉತ್ಸವದ ವೇಳೆ ಕುಸಿದು ಬಿದ್ದು ಸಾವಿಗೀಡಾಗಿದ್ದು, ಈಗ ನಡೆಯುತ್ತಿರುವ ಪ್ರತಿಭಟನೆಯಿಂದಲೇ ಈ ಘಟನೆ ಸಂಭವಿಸಿರಬಹುದು ಎಂಬ ಆರೋಪಕ್ಕೆ ಕಾರಣವಾಗಿದೆ.

ಎಪಿಯುನಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದ ಅಭಿಜಿತ್ ಶಿಂಧೆ ಶುಕ್ರವಾರ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಕುಸಿದುಬಿದ್ದು ಸಾವಿಗೀಡಾಗಿದ್ದರು. 

ಸಂತಾಪ ಸೂಚಿಸಿರುವ ಎಪಿಯು, 'ಎಂಎ ಡೆವಲಪ್‌ಮೆಂಟ್ ಪ್ರೋಗ್ರಾಮ್‌ಗಳ ನಮ್ಮ ಮೊದಲ ವರ್ಷದ ವಿದ್ಯಾರ್ಥಿಗಳಲ್ಲಿ ಒಬ್ಬರಾದ ಅಭಿಜಿತ್ ಶಿಂಧೆ ಅವರು ಇಂದು ಮಧ್ಯಾಹ್ನ ನಿಧನರಾದರು ಎಂದು ನಾವು ನಿಮಗೆ ತೀವ್ರ ದುಃಖದಿಂದ ತಿಳಿಸುತ್ತೇವೆ. ವಿಶ್ವವಿದ್ಯಾನಿಲಯವು ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದೆ. ಅವರ ಕುಟುಂಬ ಮತ್ತು ಸ್ನೇಹಿತರಿಗೆ ನಾವು ನಮ್ಮ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇವೆ' ಎಂದಿದೆ.

ಉತ್ಸವವೊಂದರ ಉದ್ಘಾಟನಾ ಸಮಾರಂಭದಲ್ಲಿ ಆತ ನೃತ್ಯ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವಿಶ್ವವಿದ್ಯಾಲಯ ಹೇಳಿದೆ. 'ವಿದ್ಯಾರ್ಥಿ ಪ್ರದರ್ಶನ ಮಾಡುವಾಗ ಕುಸಿದು ಬಿದ್ದಾಗ, ಕ್ಯಾಂಪಸ್ ವೈದ್ಯರು ತಕ್ಷಣವೇ ಅವರನ್ನು ಭೇಟಿ ಮಾಡಿದರು ಮತ್ತು ಈ ವೇಳೆ ನಾಡಿಮಿಡಿತ ಇರಲಿಲ್ಲ. ಆತನನ್ನು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು' ಎಂದು ಹೇಳಿದೆ.

ಈ ಮಧ್ಯೆ, ಎಪಿಯು ಕ್ಯಾಂಪಸ್‌ನಲ್ಲಿ ಹಾಸ್ಟೆಲ್‌ನಿಂದ ಕ್ಯಾಂಪಸ್‌ಗೆ ಬರುವುದಕ್ಕೆ ಮತ್ತು ಹೋಗುವುದಕ್ಕೆ ವಿಧಿಸಿರುವ ನಿಯಮಬಾಹಿರ ಬಸ್ ಶಟಲ್‌ ಪ್ರಯಾಣ ಶುಲ್ಕವನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಫೆಬ್ರುವರಿ 22 ರಂದು ಪ್ರಾರಂಭವಾದ ಉಪವಾಸ ಸತ್ಯಾಗ್ರಹ ಕೊನೆಗೊಂಡಿತು. ಆರ್ಥಿಕವಾಗಿ ದುರ್ಬಲರಾಗಿರುವ ವಿದ್ಯಾರ್ಥಿಗಳ ಶುಲ್ಕವನ್ನು ಮನ್ನಾ ಮಾಡಲು ಮತ್ತು ಅದನ್ನು ಶೇ 100 ರಷ್ಟು ವಿದ್ಯಾರ್ಥಿವೇತನ ಹೊಂದಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನದಲ್ಲಿ ಸೇರಿಸಲು ಅವರು ಸಿದ್ಧರಿದ್ದಾರೆ ಎಂದು ವಿಶ್ವವಿದ್ಯಾಲಯ ಹೇಳಿದೆ.

ಆದರೆ, ಶಿಂಧೆ ಅವರ ಸಾವಿಗೆ ಪ್ರತಿಭಟನೆಗೂ ಸಂಬಂಧವಿದೆ ಎಂದು ಆರೋಪಿಸಲಾಗಿದೆ. ಅನೇಕ ವಿದ್ಯಾರ್ಥಿಗಳು ಶಿಂಧೆ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದರು ಎಂದು ಹೇಳಿದ್ದು, ಇದನ್ನು ವಿಶ್ವವಿದ್ಯಾಲಯ ನಿರಾಕರಿಸಿದೆ. 'ಮೃತ ವಿದ್ಯಾರ್ಥಿಯು ಫೆಬ್ರುವರಿ 23 ಅಥವಾ 24 ರಂದು ಉಪವಾಸ ಸತ್ಯಾಗ್ರಹ ನಡೆಸಿರಲಿಲ್ಲ. ಅವರು ವಿದ್ಯಾರ್ಥಿಗಳ ಒಂದು ಸಣ್ಣ ಗುಂಪು ನಡೆಸುತ್ತಿದ್ದ 'ಪ್ರತಿಭಟನೆ'ಯನ್ನು ತೊರೆದಿದ್ದರು' ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

SCROLL FOR NEXT