ಐಪಿಎಸ್ ಅಧಿಕಾರಿ ಡಿ. ರೂಪಾ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ 
ರಾಜ್ಯ

ಫೇಸ್ ಬುಕ್ ನಲ್ಲಿ ಐಎಎಸ್ ಅಧಿಕಾರಿ ರೋಹಿಣಿ ವಿರುದ್ಧ ಮತ್ತೆ ಡಿ. ರೂಪಾ ಫೋಸ್ಟ್!

ಮೈಸೂರು ಎಟಿಐನಿಂದ ರೋಹಿಣಿ ರೋಹಿಣಿ ಸಿಂಧೂರಿ ತೆಗೆದುಕೊಂಡು ಹೋದ ಸರ್ಕಾರಿ ಸಾಮಾನುಗಳು ಡಿಸಿ ಮನೆಯಲ್ಲಿ ಕೂಡಾ ಇಲ್ಲ,  ಎಲ್ಲಿ ಹೋದವು ಎಂಬುದಾಗಿ ಸಿಂಧೂರಿ ಅವರಿಗೆ ನೊಟೀಸ್ ಜಾರಿ ಮಾಡಿದ್ದು ವರದಿಯಾಗಿದೆ. ಇದರ ಮೇಲೆ ಕ್ರಮ ಆಯಿತೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು:  ಐಪಿಎಸ್‌ ಅಧಿಕಾರಿ ಡಿ.ರೂಪಾ ಮತ್ತು ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳ ಸದ್ಯಕ್ಕೆ ನಿಲ್ಲವ ಸೂಚನೆ ಕಾಣುತ್ತಿಲ್ಲ. ಯಾವುದೇ ಕಾರಣಕ್ಕೂ ಇನ್ಮುಂದೆ ಸಾರ್ವಜನಿಕವಾಗಿ, ಸಾಮಾಜಿಕ ಜಾಲತಾಣ, ಮಾಧ್ಯಮಗಳಿಗೆ ಹೇಳಿಕೆ ನೀಡುವಂತಿಲ್ಲ ಎಂದು ಇಬ್ಬರು ಉನ್ನತ ಅಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಇಲಾಖೆಯಿಂದ ನೋಟಿಸ್ ನೀಡಲಾಗಿತ್ತು.

ಆದರೆ, ಈ ನೋಟಿಸ್ ಗೂ  'ಡೋಂಟು ಕೇರ್' ಎನ್ನದ ಐಪಿಎಸ್ ಅಧಿಕಾರಿ ಡಿ. ರೂಪಾ ಮತ್ತೆ ಫೇಸ್ ಬುಕ್ ನಲ್ಲಿ ರೋಹಿಣಿ ವಿರುದ್ಧ ಫೋಸ್ಟ್ ಮಾಡಿದ್ದಾರೆ.

ತಮ್ಮ ಫೇಸ್ ಬುಕ್ ಖಾತೆಯಲ್ಲಿ ವರದಿಯೊಂದನ್ನು ಹಂಚಿಕೊಂಡಿರುವ  ಡಿ. ರೂಪಾ, ಮೈಸೂರು ಎಟಿಐನಿಂದ ರೋಹಿಣಿ  ಸಿಂಧೂರಿ ತೆಗೆದುಕೊಂಡು ಹೋದ ಸರ್ಕಾರಿ ಸಾಮಾನುಗಳು ಡಿಸಿ ಮನೆಯಲ್ಲಿ ಕೂಡಾ ಇಲ್ಲ,  ಎಲ್ಲಿ ಹೋದವು ಎಂಬುದಾಗಿ ಸಿಂಧೂರಿ ಅವರಿಗೆ ನೊಟೀಸ್ ಜಾರಿ ಮಾಡಿದ್ದು ವರದಿಯಾಗಿದೆ. ಇದರ ಮೇಲೆ ಕ್ರಮ ಆಯಿತೇ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ವಸ್ತು 50 ರೂಪಾಯಿ ಇರಲಿ,50 ಕೋಟಿ ಇರಲಿ, ತಪ್ಪು ತಪ್ಪೇ. 1000 ರೂಪಾಯಿ ಲಂಚ ತೆಗೆದುಕೊಂಡವರು ಕೂಡ ಲೋಕಾಯುಕ್ತ ವಿಚಾರಣೆಗೆ ಒಳಗಾಗಿದ್ದಾರೆ. ಕಾನೂನು ಡಿಸಿಗು, ಗುಮಾಸ್ತನಿಗು ಒಂದೇ ಎಂದು ಡಿ. ರೂಪಾ ಮೌದ್ಗಿಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT