ಮೃತ ಕಾರ್ಮಿಕ ನವೀನ 
ರಾಜ್ಯ

ಹಾವೇರಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ರ ಸಕ್ಕರೆ ಕಾರ್ಖಾನೆ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಹಾವೇರಿ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಮಾಲೀಕತ್ವದ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಯಂತ್ರದ ಬೆಲ್ಟ್ ಗೆ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ದುಂಢಸಿ ಗ್ರಾಮದ ನವೀನ ಬಸಪ್ಪ ಚಲವಾದಿ(19 ವರ್ಷ) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಕಬ್ಬು ತುಂಬುವ ಯಂತ್ರದ ಬೆಲ್ಟಿಗೆ ನವೀನನ ಎರಡು ಕೈಗಳು ಸಿಲುಕಿ ತುಂಡಾಗಿ, ತೀವ್ರ ರಕ್ತಸ್ರಾವದಿಂದ ಕಾರ್ಮಿಕ ನವೀನ್ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಕಾರ್ಖಾನೆಯಲ್ಲಿ ಯಾವುದೇ ಸುರಕ್ಷತಾ ಕ್ರಮವಿರಲಿಲ್ಲ
"ಕೋಣನಕೇರಿಯ ವಿಐಪಿಎನ್ ಡಿಸ್ಟಿಲರಿ ಕಾರ್ಖಾನೆಯಲ್ಲಿ  ಯಾವುದೇ ಸುರಕ್ಷಾ ಕ್ರಮವಿಲ್ಲದೇ,  ದೊಡ್ಡ ದೊಡ್ಡ ಯಂತ್ರಗಳ ಬೆಲ್ಟ್ ಹತ್ತಿರ ಕೌಶಲರಹಿತ ಕಾರ್ಮಿಕನಿಂದ ಬುಟ್ಟಿಯಿಂದ ಕಬ್ಬಿನ ಪುಡಿಯನ್ನು ತುಂಬಿ ಹಾಕಿಸಲಾಗುತ್ತಿತ್ತು. ಸ್ಥಳದಲ್ಲಿ ಯಾವುದೇ ಜಾಲರಿ, ಸುರಕ್ಷಾ ಕ್ರಮಗಳಿಲ್ಲದ ಕಾರಣ ಈ ದುರ್ಘಟನೆ ನಡೆದಿದೆ" ಎಂದು ಮೃತನ ಸಂಬಂಧಿಗಳು ದೂರಿದ್ದಾರೆ.

ಕಾರ್ಖಾನೆ ಮಾಲೀಕ ವಿವೇಕ ಹೆಬ್ಬಾರ್, ಜನರಲ್ ಮ್ಯಾನೇಜರ್ ಮಂಜುನಾಥ, ಲೇಬರ್ ಸಪ್ಲೈರ್ಗಳಾದ ಬಸವರಾಜ, ಉಮೇಶ ಸುರವೇ, ವಿಶ್ವನಾಥ ಎ.ಎಸ್,  ಆಕಾಶ ಧರ್ಮೋಜಿ ಸೇರಿದಂತೆ 6 ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT